ಬಲ್ಯದಲ್ಲಿ ಬೈಕ್, ಕಾರು ಡಿಕ್ಕಿ – ಬೈಕ್ ಸವಾರನಿಗೆ ಗಾಯ

0

ಪುತ್ತೂರು: ಬೈಕ್ ಹಾಗೂ ಕಾರೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಫೆ.23 ರಂದು ಬೆಳಿಗ್ಗೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯದಲ್ಲಿ ನಡೆದಿದೆ.

ಬಲ್ಯ ಗ್ರಾಮದ ಕಕ್ಕೆಮಜಲು ನಿವಾಸಿ ದಿನೇಶ್ ಗಾಯಗೊಂಡವರಾಗಿದ್ದಾರೆ. ಇವರು ಬಲ್ಯದಿಂದ ನೆಲ್ಯಾಡಿಗೆ ಹೋಗಲೆಂದು ಬಲ್ಯ ನೆಲ್ಯಾಡಿ ಕ್ರಾಸ್ ನಲ್ಲಿ ಬೈಕ್ ತಿರುಗಿಸುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ.

ಘಟನೆಯಲ್ಲಿ ಗಾಯಗೊಂಡಿರುವ ದಿನೇಶ್ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here