ಫೆ.24: ಪಡುಮಲೆಗೆ ಪುತ್ತೂರಿನಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ

0

ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ  ಮತ್ತು ಸಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾರ್ಶಿವಾದದೊಂದಿಗೆ ಶ್ರೀ ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ  ಫೆ. 25ರಿಂದ ಮಾ.5 ರತನಕ ನಡೆಯಲಿದೆ. ಇದರ ಅಂಗವಾಗಿ ಫೆ.24  ಅಪರಾಹ್ನ ಗಂ 3ಕ್ಕೆ  ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸನ್ನಿಧಿಯಿಂದ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಗುವುದು.

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಭಟ್ ಮುಳಿಯ ಉದ್ಘಾಟನೆ ಮಾಡಲಿದ್ದಾರೆ. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಹಸಿರು ಹೊರೆಕಾಣಿಕೆ ಮೆರವಣಿಗೆಯು ಸಿಂಗಾರಿ ಮೇಳ, ವಾದ್ಯಘೋಷ, ಗೊಂಬೆಗಳೊಂದಿಗೆ ವೈಭವದ ಮೆರವಣಿಗೆ ಪುತ್ತೂರು ಮಹಾಲಿಂಗೇಶ್ವರ ಸನ್ನಿಧಿಯಿಂದ ಸಂಟ್ಯಾರು, ಕುಂಬ್ರ, ಕೌಡಿಚ್ಚಾರ್, ಪೆರೀಗೇರಿ ಮಾರ್ಗವಾಗಿ ಶ್ರೀ ಕ್ಷೇತ್ರ ಪಡುಮಲೆಗೆ ಆಗಮಿಸಲಿದೆ ಎಂದು ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here