ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯಂಗವಾಗಿ ಕಾನೂನು ಮಾಹಿತಿ ಕಾರ್ಯಾಗಾರ

0

ಪುತ್ತೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ವಕೀಲರ ಸಂಘ ಪುತ್ತೂರು ಮತ್ತು ಎಚ್‌ಪಿಆರ್ ಇನ್ಸ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಆಂಡ್ ಪ್ಯಾರ ಮೆಡಿಕಲ್ ಸೈನ್ಸ್ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯ ಅಂಗವಾಗಿ ಕಾನೂನು ಮಾಹಿತಿ ಕಾರ್ಯಾಗಾರವು ಫೆ. 23ರಂದು ನೆಲ್ಲಿಕಟ್ಟೆ ಎಪಿಎಂಸಿ ರಸ್ತೆಯಲ್ಲಿರುವ ಎಚ್‌ಪಿಆರ್ ಇನ್ಸ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಆಂಡ್ ಪ್ಯಾರ ಮೆಡಿಕಲ್ ಸೈನ್ಸ್ ಸಂಸ್ಥೆಯಲ್ಲಿ ನಡೆಯಿತು.

ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ಶಿವಣ್ಣ ಎಚ್ ಆರ್ ಕಾರ್ಯಾಗಾರ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಭಾಸ್ಕರ್ ಕೋಡಿಂಬಾಳ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಸಂಸ್ಥೆಯ ಪ್ರಾಂಶುಪಾಲೆ ಇವ್ನೀಸ್, ವಕೀಲರ ಸಂಘದ ಖಜಾಂಚಿ ಶ್ಯಾಮ್ ಪ್ರಸಾದ್ ಕೈಲಾರ್, ಕಾರ್ಯಕ್ರಮ ಸಂಯೋಜಕಿ ಪ್ಯಾರಾ ಲೀಗಲ್ ವಾಲಂಟಿಯರ್ ನಯನಾ ರೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here