ಫೆ.26:ಗಾಂಧಿ ವಿಚಾರ ವೇದಿಕೆ ಪುತ್ತೂರು ಘಟಕ, ಮಂಗಳೂರು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಿಂದ ಕರ್ನಾಟಕದ ಇಂದಿನ ಅಗತ್ಯಗಳು-ಜನ ಸಂವಾದ ಕಾರ್ಯಕ್ರಮ

0

ನಿವೃತ್ತ ಲೋಕಾಯುಕ್ತ ಜಸ್ಟೀಸ್ ಎನ್.ಸಂತೋಷ್ ಹೆಗ್ಡೆ ಭಾಗಿ

ಪುತ್ತೂರು: ಗಾಂಧಿ ವಿಚಾರ ವೇದಿಕೆ ಪುತ್ತೂರು ಘಟಕ ಮತ್ತು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನ ಮಂಗಳೂರು ಜಂಟಿಯಾಗಿ ಆಯೋಜಿಸಿರುವ ಜನ ಸಂವಾದ-ಕರ್ನಾಟಕದ ಇಂದಿನ ಅಗತ್ಯಗಳು ಕಾರ್ಯಕ್ರಮ ಫೆ.26 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜೈನ ಭವನದಲ್ಲಿ ನಡೆಯಲಿದೆ.

ವಿಷಯ ಮಂಡನೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷ ಆಡಳಿತದ ಬಗ್ಗೆ ವಿಷಯ ಮಂಡನೆ ಮತ್ತು ಸಂವಾದದಲ್ಲಿ ನಿವೃತ್ತ ಲೋಕಾಯುಕ್ತ ಜಸ್ಟೀಸ್ ಎನ್.ಸಂತೋಷ್ ಹೆಗ್ಡೆರವರು ಭಾಗವಹಿಸಲಿರುವರು. ಸಾಮಾಜಿಕ ಅಗತ್ಯಗಳ ಬಗ್ಗೆ ಪತ್ರಕರ್ತರಾದ ಬಿ.ಎಂ ಹನೀಫ್, ಯುವಜನತೆಯ ಅಗತ್ಯಗಳ ಬಗ್ಗೆ ವಿಜಯಪುರ ಚಾಣಕ್ಯ ಕರಿಯರ್ ಅಕಾಡೆಮಿಯ ನಿರ್ದೇಶಕ ಹಾಗೂ ಗಾಂಧಿ ವಿಚಾರ ವೇದಿಕೆಯ ವ್ಯವಸ್ಥಾಪಕ ಸದಸ್ಯರಾದ ಎನ್.ಎಂ ಬಿರಾದಾರರವರು ಮಾತನಾಡಲಿದ್ದಾರೆ.

ಅಧ್ಯಕ್ಷತೆಯನ್ನು ಗಾಂಧಿ ವಿಚಾರ ವೇದಿಕೆ ಪುತ್ತೂರು ಇದರ ಅಧ್ಯಕ್ಷರಾದ ಝೇವಿಯರ್ ಡಿ’ಸೋಜರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಯಾಗಿ ಚಿಂತಕರಾದ ವಿಲ್‌ಫ್ರೆಡ್ ಡಿ’ಸೋಜ ಪುತ್ತೂರು, ಉಪಸ್ಥಿತಿಯಾಗಿ ಗಾಂಧಿ ವಿಚಾರ ವೇದಿಕೆಯ ಮಾತೃ ಘಟಕದ ಆಧ್ಯಕ್ಷ ಶ್ರೀಧರ ಭಿಡೆ, ಮಂಗಳೂರು ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಸದಾನಂದ ಶೆಟ್ಟಿ, ಗಾಂಧಿ ವಿಚಾರ ವೇದಿಕೆಯ ಮಾತೃ ಘಟಕದ ಉಪಾಧ್ಯಕ್ಷ ಅಣ್ಣಾ ವಿನಯಚಂದ್ರರವರು ಭಾಗವಹಿಸಿಕೊಳ್ಳಲಿದ್ದಾರೆ ಎಂದು ಗಾಂಧಿ ವಿಚಾರ ವೇದಿಕೆ ಪುತ್ತೂರು ಘಟಕ ಮತ್ತು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನ ಮಂಗಳೂರು ಇದರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here