ನೆಲ್ಲಿಕಟ್ಟೆ ಹೆಚ್‌ಪಿಆರ್ ಕಾಲೇಜಿನಲ್ಲಿ ಕಾನೂನು ಅರಿವಿನ ಮಾಹಿತಿ

0

ಪುತ್ತೂರು: ನೆಲ್ಲಿಕಟ್ಟೆಯಲ್ಲಿರುವ ಹೆಚ್‌ಪಿಆರ್ ಇನ್‌ಸ್ಟಿಟ್ಯೂಷನ್ ಆಫ್ ನರ್ಸಿಂಗ್ ಮತ್ತು ಪಾರಾಮೆಡಿಕಲ್ ಸಯನ್ಸಸ್ ಕಾಲೇಜಿನಲ್ಲಿ ಕಾನೂನು ಅರಿವಿನ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಇವ್ನೀಸ್ ಡಿಸೋಜ ಕಾರ್ಯಕ್ರಮ ಉದ್ಘಾಟಿಸಿದರು. ಪುತ್ತೂರು ನಗರ ಠಾಣಾ ಸಬ್ ಇನ್‌ಸ್ಪೆಕ್ಟರ್ ಶ್ರೀಕಾಂತ್ ರಾಥೋಡ್ ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮಗಳು, ಮೊಬೈಲ್‌ನಿಂದ ಪರಿಣಾಮಗಳು, ಸೈಬರ್ ಕ್ರೈಮ್ ಮತ್ತು ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಹೆಡ್‌ಕಾನ್‌ಸ್ಟೇಬಲ್ ಉದಯ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಜಲಜ ಎಸ್.ಎ. ಸ್ವಾಗತಿಸಿ ಕಾವ್ಯಶ್ರಿ ಎಮ್. ವಂದಿಸಿದರು.

LEAVE A REPLY

Please enter your comment!
Please enter your name here