ಸುಬ್ರಹ್ಮಣ್ಯದಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಯನ್ನು ಸಲಿಂಗಕಾಮಕ್ಕೆ ಬಳಕೆ ಮಾಡಿದ್ದ ಆರೋಪಿ ವೇದಾವತಿಗೆ ನಿರೀಕ್ಷಣಾ ಜಾಮೀನು ಮಂಜೂರು

0

ಪುತ್ತೂರು: ಅಪ್ರಾಪ್ತೆಯನ್ನು ಸಲಿಂಗಕಾಮಕ್ಕೆ ಬಳಸಿಕೊಂಡು ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಒಂದನೇ ಆರೋಪಿಯಾಗಿರುವ ಆಲಂಗಾರು ನಿವಾಸಿ ವೇದಾವತಿ ಎಂಬವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ಅಪ್ರಾಪ್ತ ಕನ್ಯೆಯೋರ್ವಳನ್ನು ಆಕೆ ೫ನೇ ತರಗತಿ ಓದುತ್ತಿದ್ದ ಸಮಯದಲ್ಲಿ ಆಕೆಯ ಅತ್ತಿಗೆ ಅಲಂಗಾರು ನಿವಾಸಿ ವೇದಾವತಿ ಎಂಬಾಕೆ ಸಲಿಂಗ ಕಾಮಕ್ಕೆ ಒಳಪಡಿಸಿದ್ದಳು. ನಂತರ ಇತರ ೧೩ ಜನರು ದಿನಾಂಕ ೦೧/೦೧/೨೦೧೫ರಿಂದ ೩೦/೦೫/೨೦೨೨ರ ನಡುವೆ ವಿವಿಧ ಕಡೆಗಳಲ್ಲಿ ಅಪ್ರಾಪ್ತೆಯನ್ನು ಅತ್ಯಾಚಾರವೆಸಗಿದ್ದರು. ಈ ವಿಚಾರವನ್ನು ಯಾರೊಂದಿಗೂ ಹೇಳಬಾರದಾಗಿ ಆರೋಪಿಗಳು ಬೆದರಿಕೆ‌ ಒಡ್ಡಿದ್ದರು‌ ಎಂದು ಕಳೆದ ಒಂದು ತಿಂಗಳಿನಿಂದ ಮೂಡಬಿದಿರೆಯ ಬಾಲಕಿಯರ ಬಾಲಮಂದಿರದಲ್ಲಿ ಆಶ್ರಯ ಪಡೆಯುತ್ತಿದ್ದ ನೊಂದ ಬಾಲಕಿ ಅಲ್ಲಿಯ ಅಧೀಕ್ಷಕರಿಗೆ ತಿಳಿಸಿದ್ದಳು. ಬಳಿಕ‌ ಆರೋಪಿಗಳ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿತ್ತು. ನಂತರ ಪೊಲೀಸರು ಕೆಲವು ಆರೋಪಿಗಳನ್ನು ಬಂಧಿಸಿ, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ನಿಷೇಧ ಕಾಯ್ದೆಯನ್ವಯ ಪ್ರಕರಣ ದಾಖಲಿಸಿದ್ದರು.‌ಬಳಿಕ ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.‌


ಇದೀಗ ಆರೋಪಿ ವೇದಾವತಿ ತನ್ನ ಪರ ವಕೀಲರಾದ ಮಹೇಶ್ ಕಜೆಯವರ ಮುಖಾಂತರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಘಟನೆಯು ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ. ಈ ಮೇಲೆ ತಿಳಿಸಿದ ಆರೋಪಿಯು ಆಕೆಯನ್ನು ಸಲಿಂಗಕಾಮಕ್ಕೆಬಳಸಿದ್ದಾಳೆ ಎಂಬುದಕ್ಕೆ ಸಂಬಂಧಿಸಿದಂತೆ ಯಾವುದೇ ಪೂರಕವಾದ ವೈಜ್ಞಾನಿಕ ಸಾಕ್ಷ್ಯಾಧಾರಗಳು ಲಭ್ಯವಿರುವುದಿಲ್ಲ ಎಂಬಿತ್ಯಾದಿ ಅಂಶಗಳ ಕುರಿತು ಮಹೇಶ್ ಕಜೆ ವಾದ ಮಂಡಿಸಿದ್ದರು. ಸರಕಾರಿ ಅಭಿಯೋಜಕರು ಮತ್ತು ನೊಂದ ಬಾಲಕಿ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ಪುತ್ತೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ.ರವರು ಆರೋಪಿ ವೇದಾವತಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

LEAVE A REPLY

Please enter your comment!
Please enter your name here