ಪುತ್ತೂರಿನಲ್ಲಿ ಕಳವು ಪ್ರಕರಣದ ವಾರಂಟ್ ಆರೋಪಿಯ ಬಂಧನ

0

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ವರ್ಷಗಳ ಹಿಂದೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

2017 ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಉಪ್ಪಳ ನಿವಾಸಿ ಸಯ್ಯದ್ ಜಂಶೀರ್ ತಂಗಳ್ ಯಾನೆ ಜಂಶೀರ್ ತಂಗಳ್ ಬಂಧಿತ ಆರೋಪಿ. ಈತ ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದರು. ಬಳಿಕ ಕಳೆದ 4 ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.

ನ್ಯಾಯಾಲಯ ಈತನ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿ ಆಂಧ್ರಪ್ರದೇಶದಲ್ಲಿರುವುದು ಬೆಳಕಿಗೆ ಬಂದಿತ್ತು. ಆತ ಕಾಸರಗೋಡಿಗೆ ಬರುವ ಮಾಹಿತಿ‌ಪಡೆದ ಪೊಲೀಸರು ಫೆ.25 ರಂದು ಕಾಸರಗೋಡಿನ ಮಂಜೇಶ್ವರದಿಂದ ಅತನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದಾಗ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

LEAVE A REPLY

Please enter your comment!
Please enter your name here