ಗಾಯಕ ಪದ್ಮರಾಜ್ ಬಿ.ಸಿ ಚಾರ್ವಾಕರವರಿಗೆ ಸಂಗೀತ ಕಲಾನಿಧಿ ರಾಜ್ಯ ಪ್ರಶಸ್ತಿ

0

ಕಾಣಿಯೂರು: ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು, ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಸಿದ ಸುಳ್ಯ ಸರಿಗಮಪ ಸಂಗೀತ ಸ್ಪರ್ಧೆಯ ಹಾಡೊಂದು ನಾ ಹಾಡುವೆನು -2023 ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಪದ್ಮರಾಜ್ ಬಿ. ಸಿ ಚಾರ್ವಾಕ ಅವರಿಗೆ 2023 ನೇ ಸಾಲಿನ “ಸಂಗೀತ ಕಲಾನಿಧಿ ರಾಜ್ಯಪ್ರಶಸ್ತಿ ” ನೀಡಿ ಗೌರವಿಸಲಾಯಿತು.

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ, ಸಂಘಟಕ, ಸಾಹಿತಿ ಮತ್ತು ಚಿತ್ರನಿರ್ದೇಶಕರಾದ ಎಚ್.ಭೀಮರಾವ್ ವಾಷ್ಠರ್ ರವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಗಾಯಕರಾದ ನವೀನ ಪುತ್ತೂರು, ಚಂದ್ರಶೇಖರ್ ಹೆಗ್ಡೆ ಪುತ್ತೂರು, ವಸಂತ್ ಬಾರಡ್ಕ ಹಾಗೂ ಪೆರುಮಾಳ್ ಲಕ್ಷ್ಮಣ್ ಐವರ್ನಾಡು ಇನ್ನಿತರರು ಉಪಸ್ಥಿತರಿದ್ದರು.

ಶ್ರೀ ರಾಗ್ ಮ್ಯೂಸಿಕ್ಸ್ ಪುತ್ತೂರು ಮಂಗಳೂರು ತಂಡದ ನಿರ್ದೇಶಕರಾಗಿ ಸಂಗೀತ ನಿರ್ದೇಶಕರಾಗಿ, ಫಿಲಂ ಡೈರೆಕ್ಟರ್ ಆಗಿ, ಕಾರ್ಯಕ್ರಮ ನಿರೂಪಕರಾಗಿ, ಸಾಹಿತಿ, ಗಾಯಕರಾಗಿರುವ ಪದ್ಮರಾಜ್ ಅವರು ಹೊಸ ಕಿರುಚಿತ್ರ “ಕಲಹ ” ಇದಕ್ಕೆ ಅಸೋಸಿಯೇಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here