ಇವಿಎಂ, ವಿವಿಪ್ಯಾಟ್ ಭೌತಿಕ ಪ್ರದರ್ಶನ, ಜಾಗೃತಿ ಅಭಿಯಾನ ಕಾರ್ಯಕ್ರಮ

0

ಪುತ್ತೂರು: ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇವಿಎಂ, ವಿವಿಪೇಟ್, ಭೌತಿಕ ಪ್ರದರ್ಶನ ಹಾಗೂ ಜಾಗೃತಿ ಅಭಿಯಾನವು ಫೆ.26ರಂದು ತಾಲೂಕು ಆಡಳಿತ ಸೌಧದಲ್ಲಿ ನೆರವೇರಿತು.

ಮಾಸ್ಟರ್ ಟ್ರೈನರ್ ಪ್ರಶಾಂತ್‌ರವರು ಇವಿಎಂನಲ್ಲಿ ಮತದಾನ ಮಾಡುವ ವಿಧಾನ ಹಾಗೂ ವಿವಿಪ್ಯಾಟ್‌ನಲ್ಲಿ ಖಚಿತ ಪಡಿಸಿಕೊಳ್ಳುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ತಹಶೀಲ್ದಾರ್ ರಮೇಶ್ ಬಾಬು, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ನಗರಸಭಾ ಪೌರಾಯುಕ್ತ ಮಧು ಮನೋಹರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಜಿ.ಪಂ ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಭರತ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು, ಎಲ್ಲಾ ಸೆಕ್ಟರ್ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬಂದಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು.

ಉಪತಹಶೀಲ್ದಾರ್ ಸುಲೋಚನಾ ಪಿ.ಕೆ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here