ಆರ್ಯಾಪು ಗ್ರಾ.ಪಂ ಉಪಚುನಾವಣೆಯ ಫಲಿತಾಂಶ ಪ್ರಕಟ
ಬಿಜೆಪಿ ಬೆಂಬಲಿತ ಅಭ್ಯರ್ಥಿ ಯತೀಶ್ ದೇವ ಗೆಲುವು

0

ಪುತ್ತೂರು: ಪುತ್ತೂರು ತಾಲೂಕಿನ ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್ 4ರ ಸದಸ್ಯನೋರ್ವನ ಮರಣದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯತೀಶ್ ದೇವರವರು 171 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.

ಆರ್ಯಾಪು ವಾರ್ಡ್ 4ರ ಸದಸ್ಯ ಗಿರೀಶ್ ಮರಿಕೆಯವರ ಮರಣದಿಂದ ತೆರವಾದ ಸ್ಥಾನಕ್ಕೆ ಫೆ.25ರಂದು ಮತದಾನ ಪ್ರಕ್ರಿಯೆಗಳು ನಡೆದಿದೆ. ಮತ ಎಣಿಕೆ ಕಾರ್ಯಗಳು ಫೆ.28ರಂದು ತಾಲೂಕು ಆಡಳಿತ ಸೌಧದಲ್ಲಿ ನೆರವೇರಿದೆ.

ವಾರ್ಡ್ 4ರ ಸಾಮಾನ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯತೀಶ್ ದೇವರವರು 498 ಮತಗಳನ್ನು ಪಡೆದು, 327 ಮತಗಳನ್ನು ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಜ್ವಲ್ ರೈ ತೊಟ್ಲರವರ ವಿರುದ್ಧ   ಮತಗಳ 171 ಅಂತರದಿಂದ ಜಯಗಳಿಸಿದ್ದಾರೆ. 11 ಮತಗಳು ತಿರಸ್ಕೃತಗೊಂಡಿದೆ.

ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಚುನಾವಣಾಧಿಕಾರಿ ತ್ರಿವೇಣಿ ರಾವ್, ಉಪತಹಶೀಲ್ದಾರ್ ಸುಲೋಚನ ಪಿ.ಕೆ., ಭೂ ಮಾಪನಾ ಇಲಾಖೆಯ ಮಲ್ಲಿಕ್, ಗ್ರಾಮ ಆಡಳಿತಾಧಿಕಾರಿ ಚಂಗಪ್ಪ, ತಾಲೂಕು ಕಚೇರಿಯ ರಾಧಾಕೃಷ್ಣ ಮತ ಎಣಿಕೆ ಕಾರ್ಯದಲ್ಲಿ ಸಹಕರಿಸಿದ್ದರು.

LEAVE A REPLY

Please enter your comment!
Please enter your name here