ಮಾ.1: ಕೌಡಿಚ್ಚಾರಿನಲ್ಲಿ ಕಾಂಗ್ರೆಸ್ ಉತ್ಸವ-2023

0

ಪುತ್ತೂರು: ಅರಿಯಡ್ಕ ವಲಯ ಕಾಂಗ್ರೆಸ್ ಇದರ ಆಶ್ರಯದಲ್ಲಿ ಮಾ. 1 ರಂದು ಕೌಡಿಚ್ಚಾರಿನಲ್ಲಿ ಕಾಂಗ್ರೆಸ್ ಉತ್ಸವ 2023ನಡೆಯಲಿದೆ ಎಂದು ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ತಿಳಿಸಿದ್ದಾರೆ.

ಕೌಡಿಚ್ಚಾರ್ ಎಸ್ ಬಿಲ್ಡಿಂಗ್ ವಠಾರದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯ ತನಕ ಉತ್ಸವ ನಡೆಯಲಿದೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಉತ್ಸವ ಉದ್ಘಾಟನೆ ಮಾಡಲಿದ್ದು, ಖ್ಯಾತ ಚಿಂತಕ ಎಂ ಜಿ ಹಗ್ಡೆ ಮುಖ್ಯ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಪಂಚಾಯತ್ ಸದಸ್ಯರುಗಳು, ಮಾಜಿ ವಲಯ ಅಧ್ಯಕ್ಷರುಗಳು, ಹಿರಿಯ ಕಾಂಗ್ರೆಸ್ ಕಾರ್ಯಕರ್ತರಿಗೆ, ಸಹಕಾರ, ಶಿಕ್ಷಣ ಕ್ಷೇತ್ರದ ಸಾಧಕರಿಗೆ, ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಯು ಟಿ ಖಾದರ್‌ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು ಮಾಜಿ ಸಚಿವರುಗಳಾದ ರಮಾನಾಥ ರೈ ಮತ್ತು ವಿನಯಕುಮಾರ್ ಸೊರಕೆಯವರು ಅಭಿನಂದಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಲಯಾಧ್ಯಕ್ಷರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here