40 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು

0

ಕಡಬ: ಶ್ರೀಗಂಧ ಹಾಗೂ ವಾಹನ ಕಳವು ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು 40 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕಡಬ ಪೊಲೀಸರು ಮೂಡಿಗೆರೆ ತಾಲೂಕಿನ ಬಾಳೂರು ಎಂಬಲ್ಲಿ ಬಂಧಿಸಿದ್ದಾರೆ.

ಸಕಲೇಶಪುರ ತಾಲೂಕಿನ ಕೊಡಿಗೆ ಗ್ರಾಮದ ಅಬೂಬಕ್ಕರ್ (63 ವ.) ಬಂಧಿತ ಆರೋಪಿ. ಕಡಬ ಠಾಣಾ ಹೆಚ್.ಸಿ.ಗಳಾದ ರಾಜು ನಾಯಕ್, ಭವಿತ್‌ರಾಜ್ ಮತ್ತು ಪಿ.ಸಿ. ಸಿರಾಜುದ್ದೀನ್ ಎಂಬುವರು ಮೂಡಿಗೆರೆ ತಾಲೂಕು ಬಾಳೂರು ಎಂಬಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿ ಮೇಲೆ ರಾಣೆಬೆನ್ನೂರು ಪೊಲೀಸ್ ಠಾಣೆ ಹಾಗೂ ಮೈಸೂರು ವಿವಿ ಪುರಂ ಪೊಲೀಸ್ ಠಾಣೆಯ ಪ್ರಕರಣಗಳಲ್ಲೂ ವಾರಂಟ್ ಜಾರಿಯಾಗಿರುವುದಾಗಿ ತಿಳಿದುಬಂದಿದೆ.

LEAVE A REPLY

Please enter your comment!
Please enter your name here