ದಕ್ಷಿಣ ಭಾರತ ಮಟ್ಟದ ಯೋಗಾಸನ ಸ್ಪರ್ಧೆ ; ಆರಾಧ್ಯ ರೈಗೆ ದ್ವಿತೀಯ ಸ್ಥಾನ

0

ನೆಲ್ಯಾಡಿ: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು, ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಎಸ್‌ಜಿಎಸ್, ಅಂತಾರಾಷ್ಟ್ರೀಯ ಯೋಗ ಪ್ರತಿಷ್ಠಾನ ಹಾಗೂ ಮೈಸೂರು ಯೋಗ ಒಕ್ಕೂಟದ ಸಹಯೋಗದೊಂದಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆಯ ಅಂಗವಾಗಿ ಫೆ.26ರಂದು ಮೈಸೂರಿನಲ್ಲಿ ನಡೆದ ದಕ್ಷಿಣ ಭಾರತ ಯೋಗಾಸನ ಕ್ರೀಡಾ ಸ್ಪರ್ಧೆಯ 9 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಸುಳ್ಯ ನಿರಂತರ ಯೋಗ ಕೇಂದ್ರದ ವಿದ್ಯಾರ್ಥಿ ಆರಾಧ್ಯ ಎ.ರೈ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಈಕೆ ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈಕೆ ಪುತ್ತೂರು ತಾಲೂಕು ತೊಟ್ಲ ಅವಿನಾಶ್ ರೈ ಮತ್ತು ಸಂಧ್ಯಾ ರೈ ದಂಪತಿಯ ಪುತ್ರಿ. ಸುಳ್ಯದ ನಿರಂತರ ಯೋಗ ಕಲಿಕಾ ಕೇಂದ್ರದ ಯೋಗ ಶರತ್ ಮರ್ಗಿಲಡ್ಕ ಇವರಿಗೆ ಮಾರ್ಗದರ್ಶನ ನೀಡಿದ್ದಾರೆ.

LEAVE A REPLY

Please enter your comment!
Please enter your name here