ಮಾ.2-4: ಬೆಳಿಯೂರುಕಟ್ಟೆ ಮಂಜ ಮಖಾಂ ಉರೂಸ್ ಸಮಾರಂಭ

0

ಬೆಳಿಯೂರುಕಟ್ಟೆ ಮಂಜ ದರ್ಗಾ ಶರೀಫ್ ಉರೂಸ್ ಸಮಾರಂಭ ಮಾ.2ರಿಂದ ಮಾ.4ರ ವರೆಗೆ ಮಂಜ ಅನ್ಸಾರಿಯ ಜುಮಾ ಮಸ್ಜಿದ್ ನ ಗೌರವಾಧ್ಯಕ್ಷರಾದ ಸಯ್ಯದ್ ಫಕ್ರುದ್ದೀನ್ ಹದ್ದಾದ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮಾ.2ರಂದು ಬೆಳಿಗ್ಗೆ 9 ಗಂಟೆಗೆ ಅನ್ಸಾರಿಯಾ ಜಮಾಅತ್ ಕಮಿಟಿ ಮಂಜ ಇದರ ಅಧ್ಯಕ್ಷ ಉಮ್ಮರ್ ಫಾರೂಕ್ ಧ್ವಜಾರೋಹಣ ನೆರವೇರಿಸಲಿದ್ದು ಅಸರ್ ನಮಾಜಿನ ಬಳಿಕ ಮಹಮೂದುಲ್ ಫೈಝಿ ಓಲೆಮುಂಡೋವು ನೇತೃತ್ವದಲ್ಲಿ ಸ್ವಲಾತ್ ಮಜ್ಲಿಸ್ ನಡೆಯಲಿದೆ. ಮಗ್ರಿಬ್ ನಮಾಜಿನ ಬಳಿಕ ಮಂಜ ಮುಹ್ಯಿಸುನ್ನ ದರ್ಸ್ ವಿದ್ಯಾರ್ಥಿಗಳಿಂದ ಬುರ್ದಾ ಆಲಾಪನೆ ನಡೆಯಲಿದೆ.

ನಂತರ ಸಯ್ಯದ್ ಮುಝಮ್ಮಿಲ್ ತಂಙಳ್ ಕಾಸರಗೋಡು ದುವಾಶೀರ್ವಚನ ನೀಡಲಿದ್ದರು ಪರಿಯಲ್ತಡ್ಕ ಖತೀಬ್ ಹಸೈನಾರ್ ಫೈಝಿ ಉದ್ಘಾಟಿಸಲಿದ್ದಾರೆ.

ಮಾ.3ರಂದು ಮಗ್ರಿಬ್ ನಮಾಜಿನ ಬಳಿಕ ಅಬ್ದುಲ್ಲತೀಫ್ ಸಖಾಫಿ ಕಾಂತಪುರಂ ನೇತೃತ್ವದಲ್ಲಿ ಆಧ್ಯಾತ್ಮಿಕ ‘ಮದನಿಯಂ ಮಜ್ಲಿಸ್’ ನಡೆಯಲಿದೆ. ಮಂಜ ಮುಹ್ಯಿಸುನ್ನ ದರ್ಸ್ ಮುದರ್ರಿಸ್ ಮುಹಮ್ಮದ್ ಝಾಹಿದ್ ಫಾಳಿಲಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮಾ.4ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಯ್ಯದ್ ಫಕ್ರುದ್ದೀನ್ ಹದ್ದಾದ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಯ್ಯದ್ ಶಿಹಾಬುದ್ದೀನ್ ಅಲ್ ಹೈದ್ರೋಸಿ ತಂಙಳ್ ಕಿಲ್ಲೂರು ದುವಾ ನೆರವೇರಿಸಲಿದ್ದು ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಲಿದ್ದಾರೆ. ಸಿರಾಜುದ್ದೀನ್ ಸಖಾಫಿ ಕನ್ಯಾನ ಭಾಷಣ ನಡೆಸಲಿದ್ದು ಯಾಸೀನ್ ಜೌಹರಿ ಮದನಿ ಕೊಲ್ಲಮ್ ಮುಖ್ಯಪ್ರಭಾಷಣ ನಡೆಸಲಿದ್ದಾರೆ. ಹಲವು ಉಲಮಾ ಉಮರಾ ನಾಯಕರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಉರೂಸ್ ಕಮಿಟಿ ಅಧ್ಯಕ್ಷ ಯೂಸುಫ್ ಗೌಸಿಯಾ ಸಾಜ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here