ಚಾರ್ವಾಕ ಕುಂಬ್ಲಾಡಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಕೆಲಸಗಾರನ ಶವ ಪತ್ತೆ

0

ಕಾಣಿಯೂರು : ಕೃಷಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಫೆ. 25ರಂದು ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ಎಂಬಲ್ಲಿ ನಡೆದಿದೆ.

ಗದಗ ಜಿಲ್ಲೆಯ ಗೋವಿಂದ (55) ಮೃತಪಟ್ಟವರು. ಸತ್ಯಪ್ರಸಾದ್ ಎಂಬವರು ಕೃಷಿ ಹಾಗೂ ಕೋಳಿ ಫಾರಂ ನೋಡಿಕೊಳ್ಳಲು ಗೋವಿಂದ ಅವರನ್ನು ನೇಮಿಸಿಕೊಂಡಿದ್ದು, ಆರು ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದರು. ಫೆ.21 ರಂದು ಊರಿಗೆ ಹೋಗುವುದಾಗಿ ಹೇಳಿ ಸತ್ಯಪ್ರಸಾದ್‌ರಿಂದ ಗೋವಿಂದ 5000 ರೂ. ಪಡೆದುಕೊಂಡು ಹೋಗಿದ್ದರು.

ಫೆ.25ರಂದು ಸತ್ಯಪ್ರಸಾದ್ ಅವರು ತಮ್ಮ ಕೃಷಿ ತೋಟಕ್ಕೆ ನೀರು ಬಿಡುವರೇ ಬೆಳಗ್ಗೆ ಹೋದಾಗ ತೋಟದಲ್ಲಿ ವಾಸನೆ ಬರುತ್ತಿದ್ದು ಹತ್ತಿರ ಹೋಗಿ ನೋಡಿದಾಗ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿರುವುದು ಪತ್ತೆಯಾಗಿತ್ತು. ಬಳಿಕ ಅದು ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಗೋವಿಂದ ಅವರದ್ದಾಗಿತ್ತು.

ಊರಿಗೆ ಹೋಗುತ್ತೇನೆಂದು ಗೋವಿಂದ ಊರಿಗೆ ಹೋಗದೇ ತೋಟದಲ್ಲಿ ಬಿದ್ದುಕೊಂಡು ಮೃತಪಟ್ಟಿದ್ದು ಯಾವುದೋ ವಿಷಪದಾರ್ಥ ಸೇವನೆ ಮಾಡಿಯೋ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವುದಾಗಿದೆ ಎಂದು ಸತ್ಯಪ್ರಸಾದ್ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here