![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ ಮಾ 7, 8ರಂದು ನಡೆಯಲಿರುವ 48ನೇ ವರ್ಷದ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ ಕಾರ್ಯಕ್ರಮ ಮಾ.1ರಂದು ನಡೆಯಿತು.
ಈ ಸಂದರ್ಭದಲ್ಲಿ ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿಯ ಮೊಕ್ತೇಸರರಾದ ಬಾಬು ಪೂಜಾರಿ ಕೆಲಂಬೀರಿ, ಆಡಳಿತ ಸಮಿತಿಯ ಅಧ್ಯಕ್ಷರಾದ ವಸಂತ ಬಿ. ಎ ಆಡಳಿತ ಸಮಿತಿ ಕಾರ್ಯದರ್ಶಿ ರಮೇಶ್ ಕೆ.ಎನ್.ಕಾರ್ಲಾಡಿ, ಕೆಲಂಬೀರಿ ಕೋಟಿ ಚೆನ್ನಯ ಕರಸೇವಾ ಸಮಿತಿ ಅಧ್ಯಕ್ಷ ಕುಶಾಲಪ್ಪ ಪೂಜಾರಿ ಕೆಲಂಬೀರಿ, ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೆರ್ಕಳ ಮತ್ತು ಕೊರಗಜ್ಜ ದೈವಸ್ಥಾನದ ಆಡಳಿತ ಸಮಿತಿ ಕೋಶಾಧಿಕಾರಿ ಕುಂಞಣ್ಣ ನಾಯ್ಕ ಕಾರ್ಲಾಡಿ ಹಾಗೂ ಆಡಳಿತ ಸಮಿತಿ ಸದಸ್ಯರು, ಕೋಟಿ ಚೆನ್ನಯ್ಯ ಕರಸೇವ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು.