ಸಾಮೆತ್ತಡ್ಕ ಹಿ.ಪ್ರಾ. ಶಾಲೆಯಲ್ಲಿ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ, ಸ್ಮಾರ್ಟ್‌ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

0

ಪುತ್ತೂರು: ಸಾಮೆತ್ತಡ್ಕ ಹಿ.ಪ್ರಾ.ಶಾಲೆಯ ವಿವೇಕ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಸ್ಮಾರ್ಟ್‌ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ ನಡೆಯಿತು. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿದರು.

ಶಾಲೆಯ ಸ್ಥಾಪಾಕಾಧ್ಯಕ್ಷ ಹಾಗೂ ನಮ್ಮ ಶಾಲೆ ಸಾಮೆತ್ತಡ್ಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋಪಾಲಕೃಷ್ಣ ಭಟ್, ಎಸ್‌ಡಿಎಂಸಿ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಪವಿತ್ರ, ನಗರಸಭೆ ಸದಸ್ಯ ಮನೋಹರ್, ಸ್ಥಾಯಿಸಮಿತಿ ಅಧ್ಯಕ್ಷ ಬಾಲಚಂದ್ರ, ನೂತನ ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ದಿನೇಶ್ ಕಾಮತ್, ಟ್ರಸ್ಟ್ ಕಾರ್ಯದರ್ಶಿ ಇಂದಿವರ್ ಭಟ್, ನಿವೃತ್ತ ಶಿಕ್ಷಕಿ ಹಿಲ್ದಾ ಮಸ್ಕರೇನಸ್, ಯುವಕ ಮಂಡಲ ಜೊತೆ ಕಾರ್ಯದರ್ಶಿ ಸಿರಾಜ್, ಎಸ್‌ಡಿಎಂಸಿ ನಿಕಟಪೂರ್ವ ಅಧ್ಯಕ್ಷ ಪಂಚಾಕ್ಷರಿ, ಕಟ್ಟಡದ ಕಂಟ್ರಾಕ್ಟರ್ ಆಶಿಕ್ ಹಾಗೂ ಹಿರಿಯ ವಿದ್ಯಾರ್ಥಿ ಫಾಹಿಜ್, ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಮರಿಯಾ ಎಂ.ಎ. ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here