ಪುತ್ತೂರು ವಿಧಾನಸಭಾ ಚುನಾವಣೆಗೆ ಒಕ್ಕಲಿಗ ಗೌಡ ಸಮುದಾಯಕ್ಕೆ ಅವಕಾಶ ನೀಡುವಂತೆ ಮನವಿ

0

ಪುತ್ತೂರು, ಸುಳ್ಯ ಗೌಡ ಸಮಾಜದ ಕಾಂಗ್ರೆಸ್ ಮುಖಂಡರ ನಿಯೋಗ ಡಿಕೆಶಿ ಭೇಟಿ !

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರಕ್ಕೆ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಬೇಕೆಂದು ಪುತ್ತೂರು ಮತ್ತು ಸುಳ್ಯ ಒಕ್ಕಲಿಗ ಗೌಡ ಸಮಾಜದ ಕಾಂಗ್ರೆಸ್ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚಿಸಿದರು.


ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಜಿಲ್ಲಾ ನಾಯಕರಿಂದ ಒಕ್ಕಲಿಗರ ಕಡೆಗಣನೆ ಮಾಡಲಾಗಿದೆ. ಒಕ್ಕಲಿಗರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನೂ ಕೊಡಲಿಲ್ಲ. ಸ್ವಾತಂತ್ರ್ಯ ಸಿಕ್ಕಿದ ಬಳಿಕ ಕೂಜುಗೋಡು ವೆಂಕಟ್ರಮಣ ಗೌಡ, ಕೆ.ವಿ.ಜಿ ಗೌಡರಿಗೆ ಅವಕಾಶ ಕೊಟ್ಟಾಗ ಸತತ ಮೂರು ಭಾರಿ ಕಾಂಗ್ರೆಸ್ ಜಯಗಳಿಸಿತ್ತು. ಅದಾದ ಬಳಿಕ ಒಕ್ಕಲಿಗ ಗೌಡ ಸಮುದಾಯಕ್ಕೆ ಅವಕಾಶ ನೀಡದ ಕಾರಣ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಡಿ.ವಿ.ಸದಾನಂದ ಗೌಡರು ವಿಜಯಿಯಾದ ಬಳಿಕ ಒಕ್ಕಲಿಗ ಗೌಡ ಸಮಾಜವನ್ನು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಕರೆಸುವ ಪ್ರಯತ್ನ ಜಿಲ್ಲಾ ನಾಯಕರಿಂದ ಇವತ್ತಿನ ತನಕ ಆಗಿಲ್ಲ. ಜಿಲ್ಲೆಯಲ್ಲಿ ಸುಮಾರು 3.5ಲಕ್ಷ ಮತದಾರರು ಒಕ್ಕಲಿಗರಿದ್ದು, ಲೋಕಸಭಾ ಚುನಾವಣೆಯಲ್ಲೂ ಅವಕಾಶ ಕೊಡುವಂತೆ ಮನವಿ ಸಲ್ಲಿಸಲಾಗಿತ್ತು. ಆಗಲು ಅವಕಾಶ ಸಿಕ್ಕಿಲ್ಲ. ಪುತ್ತೂರಿನಲ್ಲಿ ಒಕ್ಕಲಿ ಗೌಡ ಸಮುದಾಯ ಪ್ರಬಲ ಮತದಾರರಿದ್ದಾರೆ. ಹಾಗಾಗಿ ಈ ಭಾರಿ ಒಕ್ಕಲಿ ಗೌಡ ಸಮುದಾಯಕ್ಕೆ ಅವಕಾಶ ನೀಡುವಂತೆ ಜಿಲ್ಲಾ ನಾಯಕರಿಗೆ ಮನವಿ ಮಾಡಲಾಗಿತ್ತು. ಆದರೆ ಜಿಲ್ಲಾ ನಾಯಕರಿಂದ ಹಾರಿಕೆಯ ಉತ್ತರ ಬಂದಿದೆ ಎಂಬ ವಿಚಾರವನ್ನು ಡಿ.ಕೆ.ಶಿವಕುಮಾರ್ ಅವರಲ್ಲಿ ಪ್ರಸ್ತಾಪಿಸಲಾಯಿತು.

ನಿಯೋಗದಲ್ಲಿ ದ.ಕ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್, ನ್ಯಾಯವಾದಿ ವೆಂಕಪ್ಪ ಗೌಡ, ಅಮರ್‌ನಾಥ್ ಗೌಡ ಪುತ್ತೂರು, ಶೈಲಜಾ ಅಮರ್‌ನಾಥ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಗೀತಾ ಕೊಲ್ಚಾರ್, ಬಾಲಕೃಷ್ಣ ಗೌಡ ಕೆಮ್ಮಾರ, ಧೀರಜ್ ಕಕೊಡಿಪ್ಪಾಡಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here