ಉದ್ದಜಿಗಿತ: ನೆಲ್ಯಾಡಿ ಶ್ರೀರಾಮ ಶಾಲೆಯ ಮನೀಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ನೆಲ್ಯಾಡಿ: ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮೈಸೂರಿನಲ್ಲಿ ನಡೆಯುತ್ತಿರುವ 2022-23ನೇ ಸಾಲಿನ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ 14ರ ವಯೋಮಾನದ ಬಾಲಕರ ವಿಭಾಗದ ಉದ್ದಜಿಗಿತ ಸ್ಪರ್ಧೆಯಲ್ಲಿ ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ 8ನೇ ತರಗತಿಯ ವಿದ್ಯಾರ್ಥಿ ಮನೀಶ್ ಬಿ ಶೆಟ್ಟಿ ಅವರು ಪ್ರಥಮ ಸ್ಥಾನ ಪಡೆದುಕೊಂಡು ಚಿನ್ನದ ಪದಕಗಳಿಸಿದ್ದಾರೆ.

ಇವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈತ ನೆಲ್ಯಾಡಿ ಗ್ರಾಮದ ಸೂರ್ಯನಗರ ನಿವಾಸಿ ಭಾಸ್ಕರ್ ಶೆಟ್ಟಿ ಮತ್ತು ಸುಮಲತಾ ದಂಪತಿಯ ಪುತ್ರ.

LEAVE A REPLY

Please enter your comment!
Please enter your name here