ಕಬಕ ವಿದ್ಯಾಕುಟೀರ ಕಟ್ಟಡ ನಿರ್ಮಾಣಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ 15 ಲಕ್ಷ ರೂ.ಅನುದಾನ

0

ಪುತ್ತೂರು: ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನದ ವತಿಯಿಂದ ಗ್ರಂಥಾಲಯ, ವೈದ್ಯಕೀಯ ತಪಾಸಣೆ ಹಾಗೂ ಇನ್ನಿತರ ಸಮಾಜೋಪಯೋಗಿ ಕಾರ್ಯಕ್ರಮಕ್ಕಾಗಿ ಕಬಕದಲ್ಲಿ ನಿರ್ಮಾಣ ಆಗುತ್ತಿರುವ ವಿದ್ಯಾಕುಟೀರ ಕಟ್ಟಡಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರು 15 ಲಕ್ಷ ರೂ.,ಅನುದಾನ ಘೋಷಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರನ್ನು ಅವರ ಕಚೇರಿಯಲ್ಲಿ ಸಂಪ್ರತಿಷ್ಠಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಕೊಂಕೋಡಿ ಪದ್ಮನಾಭ, ಸಂಪ್ರತಿಷ್ಠಾನದ ಅಧ್ಯಕ್ಷ ರಮೇಶ ಭಟ್ ಬಿ, ಸಂಚಾಲಕ ವೇ.ಮೂ.ಮಿತ್ತೂರು ತಿರುಮಲೇಶ್ವರ ಭಟ್ಟ, ಕಾಮಗಾರಿಗಳ ಇಂಜಿನಿಯರ್ ಸತ್ಯನಾರಾಯಣ ಭಟ್‌ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here