ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ಪ್ರತಿಷ್ಠಾ ಕಲಶ, ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ಪ್ರತಿಷ್ಠಾಕಲಶ ಕಾರ್ಯಕ್ರಮ ಫೆ.28ರಂದು ನಡೆಯಿತು. ಕ್ಷೇತ್ರದ ತಂತ್ರಿ ಶ್ರೀಶಿವಾನಂದ ಶಾಂತಿಯವರು ವೈದಿಕ ವಿಧಿ ವಿಧಾನ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ ಮಾಡಲಾಯಿತು. ಮಹಾಪೂಜೆಯ ನಂತರ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೇರಾಜೆ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಮಾರ್ಚ್ 17, 18, 19ರಂದು ಜಾತ್ರಾ ಮಹೋತ್ಸ ನಡೆಯಲಿದೆ.

ಕ್ಷೇತ್ರದ ಗೌರವಾಧ್ಯಕ್ಷ ಜಯಂತ ನಡುಬೈಲು, ಅನುವಂಶಿಕ ಮುಕ್ತೇಸರ ಶ್ರೀಧರ ಪೂಜಾರಿ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಶಿವಾನಂದ ಶಾಂತಿ, ಹಿರಿಯರಾದ ದಾಸಪ್ಪ ರೈ, ಜಯರಾಮ ಬಂಗೇರ, ನಾರಾಯಣ ಮಚ್ಚಿನ, ಊರ ಹಾಗೂ ಪರಊರ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here