ಮಾ.4: ಪುತ್ತೂರು ರೈತ ಸೌಧದಲ್ಲಿ ವಿ ವಾಕ್ ಪಾದರಕ್ಷೆ ಮಳಿಗೆ ಉದ್ಘಾಟನೆ

0

ಪುತ್ತೂರು: ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ರೈತ ಸೌಧದಲ್ಲಿ ವಿ ವಾಕ್ ಪಾದರಕ್ಷೆ ಮಳಿಗೆ ಮಾ.4ರಂದು ಬೆಳಿಗ್ಗೆ 8ಗಂಟೆಗೆ ಶುಭಾರಂಭಗೊಳ್ಳಲಿದೆ. ಶಾಸಕ ಸಂಜೀವ ಮಠಂದೂರು ಮಳಿಗೆ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ನಗರಸಭಾಧ್ಯಕ್ಷ ಜೀವಂಧರ್ ಜೈನ್, ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ ಶೆಣೈ, ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಪುತ್ತೂರು ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಶಿವಶಂಕರ ಭಟ್ ಬೋನಂತಾಯ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ, ಬೆಂಗಳೂರು ಸಮಯ ನ್ಯೂಸ್ ಸಿಇಒ ಶಿವಪ್ರಸಾದ್ ಟಿ.ಆರ್. ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here