ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರ ನಮ್ಮ ಕೆರೆ ಅಜಲಡ್ಕ ಕೆರೆ ಅಭಿವೃದ್ಧಿಗೆ ಭೂಮಿಪೂಜೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪುತ್ತೂರು ತಾಲೂಕು, ಗ್ರಾಮ ಪಂಚಾಯತ್ ಒಳಮೊಗ್ರು, ಅಜಲಡ್ಕಕೆರೆ ಸಮಿತಿ ಇವರ ಸಂಯೋಗದಲ್ಲಿ 541ನೇ ನಮ್ಮೂರ ನಮ್ಮ ಕೆರೆ ಹೂಳೆತ್ತುವ, ಭೂಮಿ ಪೂಜೆ ಮತ್ತು ಉದ್ಘಾಟನೆ ಕಾರ್ಯಕ್ರಮ ಅಜಲಡ್ಕಕೆರೆ ಆವರಣದಲ್ಲಿ ಮಾ.02 ರಂದು ನಡೆಯಿತು. ಶಾಸಕ ಸಂಜೀವ ಮಠಂದೂರು ಗುದ್ದಲಿ ಪೂಜೆ ನೆರೆವೇರಿಸಿ ಶುಭ ಹಾರೈಸಿದರು.

ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಕೆರೆ ಸಮಿತಿಯ ಗೌರವ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಸಭಾಧ್ಯಕ್ಷತೆ ವಹಿಸಿದ್ದರು. ಯೋಜನಾಧಿಕಾರಿ ಆನಂದ ಕೆ, ತಾ.ಪಂ ಸಹಾಯಕ ನಿರ್ದೇಶಕರಾದ ಶೈಲಜಾ ಭಟ್, ಕೆರೆ ಸಮಿತಿ ಅಧ್ಯಕ್ಷ ರಾಜೇಶ್ ರೈ, ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಯೋಜನೆಯ ವಲಯಾಧ್ಯಕ್ಷ ಎಸ್. ಮಾಧವ ರೈ ಕುಂಬ್ರ, ಜನಜಾಗೃತಿ ಕುಂಬ್ರ ವಲಯ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಹಿರಿಯರಾದ ಬಾಳಪ್ಪ ರೈ, ಒಳಮೊಗ್ರು ಗ್ರಾಪಂ ಉಪಾಧ್ಯಕ್ಷೆ ಸುಂದರಿ ಮತ್ತಿತರರು ಉಪಸ್ಥಿತರಿದ್ದರು.

ರಾಜೀವಿ ಪ್ರಾರ್ಥಿಸಿದರು. ಕುಂಬ್ರ ವಲಯದ ಮೇಲ್ವಿಚಾರಕಿ ಸುನೀತಾ ಸ್ವಾಗತಿಸಿದರು. ಸೇವಾಪ್ರತಿನಿಧಿ ಅಕ್ಷತಾ ವಂದಿಸಿದರು. ಕೃಷಿ ಮೇಲ್ವಿಚಾರಕರಾದ ಉಮೇಶ್ ಬಿ ಕಾರ್ಯಕ್ರಮ ನಿರೂಪಿಸಿದರು. ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯರು, ಕೆರೆ ಸಮಿತಿ ಪದಾಧಿಕಾರಿಗಳು. ಸದಸ್ಯರು, ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಸೇವಾಪ್ರತಿನಿಧಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here