ಕೋಡಿಂಬಾಡಿ: ಗ್ರಾ.ಪಂ.‌ ಆರೋಗ್ಯ ಅಮೃತ ಅಭಿಯಾನ

0

ಪುತ್ತೂರು: ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನದ ಯೋಜನೆಯಡಿ ಕೋಡಿಂಬಾಡಿ ಗ್ರಾಮ‌ ಪಂಚಾಯತಿನ ಚುನಾಯಿತ ಜನಪ್ರತಿನಿಧಿಗಳಿಗೆ ಮತ್ತು ಗ್ರಾಮ ಪಂಚಾಯತ್ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ‌ ಮಾ.3ರಂದು ಕೋಡಿಂಬಾಡಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.‌

ಗ್ರಾ.ಪಂ.ಅಧ್ಯಕ್ಷ ಕೆ. ರಾಮಚಂದ್ರ ಪೂಜಾರಿ ಶಾಂತಿನಗರ, ಸದಸ್ಯ ರಾಮಣ್ಣ ಗೌಡ ಗುಂಡೋಲೆ, ಪಿಡಿಓ ರೋಹಿತಾಶ್ವ, ಕಾರ್ಯಕ್ರಮ ಸಂಯೋಜಕಿ ಅಶ್ವಿನಿ ವೇದಿಕೆಯಲ್ಲಿ‌ ಉಪಸ್ಥಿತರಿದ್ದರು.‌ ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮಗಳ ವ್ಯಾಪ್ತಿಯ ಗ್ರಾ.ಪಂ. ಸದಸ್ಯರು, ಕಾರ್ಯಪಡೆಯ ಸದಸ್ಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು ಅಂಗನವಾಡಿ ಕೇಂದ್ರಗಳ‌ ಕಾರ್ಯಕರ್ತೆಯರು, ಶಾಲಾ‌ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here