ಕುಂಬ್ರ ವರ್ತಕರ ಸಂಘದಿಂದ ಎಂ.ಎಸ್.ಮುಕುಂದ ಶಾಂತಿವನರವರಿಗೆ ಶ್ರದ್ಧಾಂಜಲಿ ಸಭೆ

0

ಪುತ್ತೂರು: ಕುಂಬ್ರ ವರ್ತಕರ ಸಂಘದ ಹಿರಿಯ ಸದಸ್ಯರಾಗಿದ್ದ, ನಾಟಿ ವೈದ್ಯ ಎಂ.ಎಸ್.ಮುಕುಂದ ಶಾಂತಿವನರವರು ಮಾ.03 ರಂದು ನಿಧನರಾಗಿದ್ದು ಅವರಿಗೆ ಕುಂಬ್ರ ವರ್ತಕರ ಸಂಘದಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಮಾ.03 ರಂದು ಸಂಜೆ ಕುಂಬ್ರ ನ್ಯೂ ಫ್ಯಾಮಿಲಿ ಕಾಂಪ್ಲೆಕ್ಸ್‌ನಲ್ಲಿರುವ ವರ್ತಕರ ಸಂಘದ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಎಂ.ಎಸ್.ಮುಕುಂದರವರ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ರಫೀಲ್ ಅಲ್‌ರಾಯ, ಸ್ಥಾಪಕಾಧ್ಯಕ್ಷ ಶ್ಯಾಮ್‌ಸುಂದರ ರೈ ಕೊಪ್ಪಳ, ಮಾಜಿ ಅಧ್ಯಕ್ಷರುಗಳಾದ ಸುಂದರ ರೈ ಮಂದಾರ, ಎಸ್.ಮಾಧವ ರೈ ಕುಂಬ್ರ, ನಾರಾಯಣ ಪೂಜಾರಿ ಕುರಿಕ್ಕಾರ, ಮೆಲ್ವಿನ್ ಮೊಂತೆರೋ, ದಿವಾಕರ ಶೆಟ್ಟಿ, ಕೋಶಾಧಿಕಾರಿ ಸಂಶುದ್ದೀನ್ ಎ.ಆರ್, ಪ್ರ.ಕಾರ್ಯದರ್ಶಿ ಭವ್ಯ ರೈ, ಕಾರ್ಯಕಾರಿ ಸಮಿತಿ ಸದಸ್ಯ ಪದ್ಮನಾಭ ಆಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here