ಮಾ.7: ಪುತ್ತೂರು ಶ್ರೀರಾಮಕೃಷ್ಣ ಸೇವಾ ಸಮಾಜದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ

0

ಪುತ್ತೂರು: ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಸರಕಾರಿ ಆಸ್ಪತ್ರೆ ಪುತ್ತೂರು, ಶ್ರೀರಾಮಕೃಷ್ಣ ಸೇವಾ ಸಮಾಜ ಪುತ್ತೂರು ಇವರ ಸಹಭಾಗಿತ್ವದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ ಮಾ.7ರಂದು ಬೆಳಿಗ್ಗೆ 9.30ರಿಂದ 12.30ರವರೆಗೆ ಪುತ್ತೂರು ಶ್ರೀರಾಮಕೃಷ್ಣ ಸೇವಾ ಸಮಾಜದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಉಚಿತ ಕಣ್ಣಿನ ಪರೀಕ್ಷೆ, ಚಿಕಿತ್ಸೆ ಮತ್ತು ಸಲಹೆ, ಉಚಿತ ಕಣ್ಣಿನ ಪೊರೆ ಆಪರೇಷನ್, ಉಚಿತ ಪ್ರಯಾಣ, ವಸತಿ, ಊಟ ಮತ್ತು ಉಪಾಹಾರ, ಉಚಿತ ಕನ್ನಡಕ ವಿತರಣೆ ನಡೆಯಲಿದೆ.

ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ಸಂಚಾರಿ ನೇತ್ರ ಘಟಕ ಹಾಗೂ ಮಂಗಲೂರಿನ ಜಿಲ್ಲಾ ಆಸ್ಪತ್ರೆ ಇವರ ಸಹಯೋಗದೊಂದಿಗೆ ಕೆಎಂಸಿಯ ನೇತ್ರ ತಜ್ಞರು ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪಿ.ಸದಾಶಿವ ಪೈ, ಡಾ.ಆಶಾ ಪುತ್ತೂರಾಯರವರನ್ನು ಸಂಪಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here