ಮಾ.5; ಕಬಕದಲ್ಲಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 21ನೇ ಶಾಖೆ ಉದ್ಘಾಟನೆ

0

ಪುತ್ತೂರು: ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿಯಲ್ಲಿ ಕೇಂದ್ರ ಕಛೇರಿಯನ್ನು ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 21ನೇ ಕಬಕ ಶಾಖೆ ಮಾ.5ರಂದು ಪುತ್ತೂರು – ಮಂಗಳೂರು‌ ರಸ್ತೆಯ ಕಬಕದ ವಿನಾಯಕ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಶಾಖೆಯ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.
ಕಬಕ ಗ್ರಾ.ಪಂ.ಅಧ್ಯಕ್ಷರಾದ ವಿನಯ್ ಕುಮಾರ್ ಕೆ.ರವರು ಭದ್ರತೆ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ.

ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಈಶ್ವರ್ ಭಟ್ ಪಂಜಿಗುಡ್ಡೆರವರು ಭದ್ರತಾ ಕೋಶವನ್ನು ಉದ್ಘಾಟಿಸಲಿದ್ದಾರೆ.

ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿರವರು ಗಣಕಯಂತ್ರವನ್ನು ಉದ್ಘಾಟನೆ ಮಾಡಲಿದ್ದಾರೆ. ಅಡ್ಯಾಲಯ ಪರಿವಾರ ದೈವಗಳ ಸೇವಾ ಸಮಿತಿಯ ಅಧ್ಯಕ್ಷರಾದ ಸತೀಶ್ ರೈ ಡಿಂಬ್ರಿಗುತ್ತುರವರು ನಿರಖು ಠೇವಣಿ ಸರ್ಟಿಫಿಕೇಟ್ ವಿತರಣೆ ಮಾಡಲಿದ್ದಾರೆ. ಪುತ್ತೂರು ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ ನಡುಬೈಲುರವರು ಉಳಿತಾಯ ಖಾತೆ ಪುಸ್ತಕ ವಿತರಣೆ ಮಾಡಲಿದ್ದಾರೆ.

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಎನ್. ಪದ್ಮನಾಭ ಮಾಣಿಂಬರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಕಬಕ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ಜೆ.ಪಿ ಸಂತೋಷ್ ಮುರ, ಕಬಕ ಬಿಲ್ಲವ ಗ್ರಾಮ ಸಮಿತಿಯ ಸ್ಥಾಪಕಾಧ್ಯಕ್ಷರಾದ ಜಿನ್ನಪ್ಪ ಪೂಜಾರಿ, ಕಬಕ ಗೀತಾ ಬಾರ್ ನ ಮಾಲಕ ರಾಮಣ್ಣ ಪೂಜಾರಿ, ಪುತ್ತೂರು ಯುವವಾಹಿನಿಯ ಅಧ್ಯಕ್ಷರಾದ ಉಮೇಶ್ ಬಾಯರ್, ಕಬಕ ಗ್ರಾ.ಪಂ.ಸದಸ್ಯ ಶಾಬಾ ಕೆ, ಕಬಕ ವಿನಾಯಕ ಕಾಂಪ್ಲೆಕ್ಸ್ ನ ಮಾಲಕರಾದ ರಮೇಶ್ ಆಚಾರ್ಯ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here