ಮುಂಡೂರು ಮೃತ್ಯುಂಜಯೇಶ್ವರ ದೇವಳದ ನಾಗನಕಟ್ಟೆ ವಿವಾದ : ನಾಗ ಪ್ರತಿಷ್ಠೆಗೆ ತಡೆಯಾಜ್ಞೆ ಕೋರಿ ಹೈಕೋರ್ಟ್ಗೆ ರಿಟ್

0

ಅರುಣ್ ಕುಮಾರ್ ಪುತ್ತಿಲ ಸಹಿತ ಐವರಿಂದ ರಿಟ್-
ವಿಚಾರಣೆ ಕೈಗೆತ್ತಿಕೊಂಡ ನ್ಯಾ| ನಾಗಪ್ರಸನ್ನ
ಸ್ಥಳಕ್ಕೆ ಭೇಟಿ ನೀಡಲು ನಿರ್ದೇಶನ ಹೊರತು ಉದ್ದೇಶಿತ ಕಾರ್ಯಕ್ರಮ ತಡೆಯಲು ಅಲ್ಲ- ಹೈಕೋರ್ಟ್
ಮುಂದಿನ ವಿಚಾರಣೆ ಮಾ.7ಕ್ಕೆ ಮುಂದೂಡಿಕೆ

ಎಂಡೋಮೆಂಟ್ ಎ.ಸಿ.ಭೇಟಿ

ಹೈಕೋರ್ಟ್ ನಿರ್ದೇಶನದಂತೆ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಗುರುರಾಜ್ ಹಾಗೂ ಪರಿವೀಕ್ಷಕ ಶ್ರೀಧರ್‌ರವರು ಮಾ.4ರಂದು ಮೃತ್ಯುಂಜಯೇಶ್ವರ ದೇವಳಕ್ಕೆ ಭೇಟಿ ನೀಡಿ, ನಾಗಪ್ರತಿಷ್ಠೆ ನಡೆಸಲುದ್ದೇಶಿಸಿರುವ ಸ್ಥಳವನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದ್ದಾರೆ.ಈ ಕುರಿತು ಅವರು ಹೈಕೋರ್ಟ್ಗೆ ವರದಿ ಸಲ್ಲಿಸಲಿದ್ದು ಮಾ.7ರಂದು ಇದು ವಿಚಾರಣೆಗೆ ಬರಲಿದೆ.

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಮಾ.7,8ರಂದು ನಡೆಸಲುದ್ದೇಶಿಸಿರುವ ನಾಗಪ್ರತಿಷ್ಠೆ ಕಾರ್ಯಕ್ರಮ ಕ್ರಮಬದ್ಧವಾಗಿ ನಡೆಯುತ್ತಿಲ್ಲವಾದ್ದರಿಂದ ಉದ್ದೇಶಿತ ಕಾರ್ಯಕ್ರಮ ನಡೆಸದಂತೆ ತಡೆಯಾಜ್ಞೆ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ.ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್, ಸ್ಥಳಕ್ಕೆ ಭೇಟಿ ನೀಡಿ ವಸ್ತುಸ್ಥಿತಿಯ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖಾ ಸಹಾಯಕ ಆಯುಕ್ತರಿಗೆ ನಿರ್ದೇಶನ ನೀಡಿದ್ದು ಮಾ.4ರಂದು ಸಹಾಯಕ ಆಯುಕ್ತರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ,ನಾರಾಯಣ ನಾಯ್ಕ್ ಕಾಳಿಂಗಹಿತ್ಲು, ಕೆ.ಬಿ.ಸುಂದರ ನಾಯ್ಕ ಮುಂಡೂರು, ಬಾಲಕೃಷ್ಣ ಕೆ.ಮುಂಡೂರು, ಹೊನ್ನಪ್ಪ ನಾಯ್ಕ್ ಬಿ.ಯಾನೆ ಹರೀಶ್ ಬಿ.ಕೆ.ಅವರು ರಿಟ್ ಅರ್ಜಿ ಸಲ್ಲಿಸಿದ್ದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು, ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮತ್ತು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರನ್ನು ಪ್ರತಿವಾದಿಗಳಾಗಿ ಕಾಣಿಸಲಾಗಿದೆ.ಅರುಣ್ ಕುಮಾರ್ ಪುತ್ತಿಲ ಅವರು ನ್ಯಾಯವಾದಿ ರಾಜಶೇಖರ್ ಎಸ್.ಅವರ ಮೂಲಕ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.ಮೃತ್ಯುಂಜಯೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಪರವಾಗಿ ನ್ಯಾಯವಾದಿ ಭಾನುಪ್ರಕಾಶ್ ವಿ.ಜಿ.ಅವರು ವಕಾಲತ್ತು ಸಲ್ಲಿಸಿದ್ದಾರೆ.

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಶಾಸ್ತ್ರ ಪ್ರಕಾರ ಕ್ರಮಬದ್ಧವಾಗಿ ನಾಗನ ಕಟ್ಟೆ ನಿರ್ಮಾಣ ಮಾಡುತ್ತಿಲ್ಲ.ಈಗ ನಿರ್ಮಾಣ ಮಾಡಲುದ್ದೇಶಿಸಿರುವ ಸ್ಥಳ ಸರಿಯಿಲ್ಲ.ಅಲ್ಲಿ ಶುಚಿತ್ವವಿಲ್ಲ ನಾಗಪ್ರತಿಷ್ಟೆ ಕಾರಕ್ರಮವೂ ಕ್ರಮಬದ್ಧ ರೀತಿಯಲ್ಲಿ ನಡೆಯುತ್ತಿಲ್ಲ ಎಂಬಿತ್ಯಾದಿ ಕಾರಣಗಳನ್ನು ಮುಂದಿಟ್ಟು ರಿಟ್ ಅರ್ಜಿ ಸಲ್ಲಿಸಿ, ಮಾ.7,8ರಂದು ನಡೆಸಲುದ್ದೇಶಿಸಿರುವ ನಾಗಪ್ರತಿಷ್ಠೆ ಕಾರ್ಯಕ್ರಮ ನಡೆಸದಂತೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಲು ಎಸಿಗೆ ಹೈಕೋರ್ಟ್ ನಿರ್ದೇಶನ:

ಫೆ .27ರಂದು ಅರ್ಜಿ ಸಲ್ಲಿಕೆಯಾಗಿದ್ದು ಮಾ.3ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ನಾಗಪ್ರತಿಷ್ಠೆ ನಡೆಯಲಿರುವ ಸ್ಥಳಕ್ಕೆ ಮಾ.4ರಂದು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಯ ಕುರಿತು ತಿಳಿದುಕೊಂಡು ವರದಿ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.ಸ್ಥಳಕ್ಕೆ ಭೇಟಿ ನೀಡಲು ಸೂಚಿಸಲಾಗಿದೆ ಹೊರತು ಇದು ಉದ್ದೇಶಿತ ಕಾರ್ಯಕ್ರಮವನ್ನು ತಡೆಯಲು ಅಲ್ಲ ಎಂದು ಹೈಕೋರ್ಟ್ ಸ್ಪಷ್ಟವಾಗಿ ಎ.ಸಿ.ಯವರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಮಾ.7ಕ್ಕೆ ಮುಂದೂಡಿದೆ.

ಎಂಡೋಮೆಂಟ್ ಎ.ಸಿ.ಭೇಟಿ:

ಹೈಕೋರ್ಟ್ ನಿರ್ದೇಶನದಂತೆ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಗುರುರಾಜ್ ಹಾಗೂ ಪರಿವೀಕ್ಷಕ ಶ್ರೀಧರ್‌ರವರು ಮಾ.4ರಂದು ಮೃತ್ಯುಂಜಯೇಶ್ವರ ದೇವಳಕ್ಕೆ ಭೇಟಿ ನೀಡಿ, ನಾಗಪ್ರತಿಷ್ಠೆ ನಡೆಸಲುದ್ದೇಶಿಸಿರುವ ಸ್ಥಳವನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದ್ದಾರೆ.ಈ ಕುರಿತು ಅವರು ಹೈಕೋರ್ಟ್ಗೆ ವರದಿ ಸಲ್ಲಿಸಲಿದ್ದು ಮಾ.7ರಂದು ಇದು ವಿಚಾರಣೆಗೆ ಬರಲಿದೆ.

ಮೃತ್ಯುಂಜಯೇಶ್ವರ ದೇವಸ್ಥಾನದ ನಾಗನಕಟ್ಟೆ ವಿಚಾರದಲ್ಲಿ ಈಗಾಗಲೇ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ದೇವಳದ ಬಳಿ ಪ್ರತಿಭಟನೆ ನಡೆದಿತ್ತು.ಹಲವು ಅಡೆತಡೆಗಳ ಬಳಿಕ ನಾಗನ ಕಟ್ಟೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಮಾ.7,8ರಂದು ನಾಗಪ್ರತಿಷ್ಠೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರೆಮನೆ ಲೋಕಪ್ಪ ಗೌಡರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ,ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗನಕಟ್ಟೆ ನಿರ್ಮಾಣಕ್ಕೆ ಜಿಲ್ಲಾಽಕಾರಿಯವರು ಅನುಮತಿ ನೀಡಿದ್ದು ಸದ್ರಿ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ಯಾವುದೇ ರೀತಿ ಸಮಸ್ಯೆಯಾಗದಂತೆ ಕಾನೂನು ಸುವ್ಯವಸ್ಥೆಗೆ ಕ್ರಮತೆಗೆದುಕೊಳ್ಳುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಈಗಾಗಲೇ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರನ್ನು ಕೋರಿದ್ದಾರೆ.

LEAVE A REPLY

Please enter your comment!
Please enter your name here