ಪುತ್ತೂರು: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಸಾಂಸ್ಕೃತಿಕ ಸಚಿವಾಲಯದ ಸಹಕಾರದೊಂದಿಗೆ 7ನೇ ವರ್ಷದ ‘ನರ್ತನಾವರ್ತನಾ -2023’ ಮಾ.5ರಂದು ಸಂಜೆ ಬಪ್ಪಳಿಗೆ ಜೈನ ಭವನದಲ್ಲಿ ನಡೆಯಲಿದೆ.
![](https://puttur.suddinews.com/wp-content/uploads/2023/03/148A1146-1-1.jpg)
ಈ ಸಂದರ್ಭದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ನಾಟ್ಯಾರಾಧನಾ ಮತ್ತು ಯಕ್ಷರಾಧನ ಕಲಾಕೇಂದ್ರದ ನಿರ್ದೇಶಕಿ ವಿದುಷಿ ಸುಮಂಗಲಾ ರತ್ನಾಕರ್ ಅವರಿಗೆ ‘ಕಲಾಶ್ರಯ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಲಿದೆ.