![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಶೌರ್ಯ ಯಾತ್ರೆ ಕಾರ್ಯಕ್ರಮ ಮಾ.೫ ರಂದು ಮಧ್ಯಾಹ್ನ 2.30 ಕ್ಕೆ ಪುತ್ತೂರು ನಗರದ ದರ್ಭೆ ವೃತ್ತದಿಂದ ಪ್ರಾರಂಭವಾಗಲಿದ್ದು ಯಾತ್ರೆಯು ಪುತ್ತೂರು ನಗರದ ಮುಖ್ಯ ರಸ್ತೆಯಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ 4.00 ಗಂಟೆಗೆ ಶೌರ್ಯ ಯಾತ್ರೆಯ ಸಭಾ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಜೀ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ವೇದಿಕೆಯಲ್ಲಿ ವಿಶ್ವ ಹಿಂದು ಪರಿಷದ್ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗ್ಡೆ, ವಿಶ್ವ ಹಿಂದು ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಬಜರಂಗದಳ ಪ್ರಾಂತ ಸಂಯೋಜಕ್ ಸುನೀಲ್ ಕೆ.ಅರ್ , ಬಜರಂಗದಳ ಮಂಗಳೂರು ವಿಭಾಗ ಸಂಯೋಜಕ್ ಭುಜಂಗ ಕುಲಾಲ್, ವಿಶ್ವ ಹಿಂದು ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ.ಕೃಷ್ಣಪ್ರಸನ್ನ, ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲ್ ಉಪಸ್ಥಿತರಿರಲಿದ್ದಾರೆ.