ಕ್ಯಾಬಿನೆಟ್ ಸಚಿವ ದರ್ಜೆ ಸ್ಥಾನಮಾನ-ಚನಿಲ ತಿಮ್ಮಪ್ಪ ಶೆಟ್ಟಿಯವರಿಗೆ ಅದ್ದೂರಿ ಸ್ವಾಗತ-ಬಪ್ಪಳಿಗೆ ಜಂಕ್ಷನ್‌ನಲ್ಲಿ ಹರ್ಷಾಚರಣೆ

0

ಪುತ್ತೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರಿಗೆ ಕ್ಯಾಬಿನೆಟ್ ಸಚಿವ ದರ್ಜೆ ಸ್ಥಾನಮಾನ ನೀಡಿ ಸರಕಾರ ಆದೇಶಿಸಿದ್ದು ಅವರು ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದಂತೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಅದ್ದೂರಿಯಿಂದ ಸ್ವಾಗತಿಸಿ, ಪಟಾಕಿ ಸಿಡಿಸಿ ಹರ್ಷಾಚರಿಸಿದರು.

ಅಧಿಕಾರವನ್ನು ಜನರ ಕೆಲಸದಲ್ಲಿ ಶ್ರದ್ಧೆಯಿಂದ ಮಾಡುತ್ತೇನೆ: ಕಾರ್ಯಕರ್ತರಿಂದ ಗೌರವ ಸ್ವೀಕರಿಸಿದ ಚನಿಲ ತಿಮ್ಮಪ್ಪ ಶೆಟ್ಟಿಯವರು ಮಾತನಾಡಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಕೊಡಿಸಿದ ಸರಕಾರ ಇವತ್ತು ಮತ್ತೆ ಕ್ಯಾಬಿನೆಟ್ ಸಚಿವ ದರ್ಜೆಯ ಸ್ಥಾನ ಮಾನ ನೀಡಿದೆ.ಇಂತಹ ಸಂದರ್ಭದಲ್ಲಿ ಅಧಿಕಾರವನ್ನು ಜನರ ಕೆಲಸದಲ್ಲಿ ಶ್ರದ್ದೆಯಿಂದ ಮಾಡಿ ತೋರಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನಿರ್ದೇಶಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ, ಕಿರಣ್ ಕುಮಾರ್ ರೈ, ಬಲ್ನಾಡು ಗ್ರಾ.ಪಂ ಸದಸ್ಯೆ ಪರಮೇಶ್ವರಿ, ನಗರಸಭಾ ಸದಸ್ಯೆ ಪೂರ್ಣಿಮಾ, ಮಾಜಿ ಸದಸ್ಯೆ ಮೋಹಿನಿ, ಪ್ರಕಾಶ್ ಕೆಲ್ಲಾಡಿ, ಅಜಿತ್‌ ರೈ ಹೊಸಮನೆ, ಹರಿಪ್ರಸಾದ್ ಯಾದವ್, ಜಯಂತ ಶೆಟ್ಟಿ ಕಂಬಳತ್ತಡ್ಡ, ಬಲ್ನಾಡು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಅಕ್ಷಯ್ ಶೆಟ್ಟಿಮಜಲು, ವಿನೋದ್ ಶೆಟ್ಟಿ ಅರಿಯಡ್ಕ, ಭರತ್ ಚನಿಲ, ವೆಂಕಟಕೃಷ್ಣ ಭಟ್, ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ಬಲ್ನಾಡು, ಬೋಜರಾಜ್, ಶಾಮಣ್ಣ ನಾಯ್ಕ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here