ಹೋರಿಯನ್ನು ಹಿಂಸಾತ್ಮಕವಾಗಿ ಕರೆದೊಯ್ಯುತ್ತಿದ್ದ ಪ್ರಕರಣದ ಆರೋಪಿಗಳಿಗೆ ಜಾಮೀನು

0

ಪುತ್ತೂರು:ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ಎಂಬಲ್ಲಿ ಹೋರಿಯೊಂದನ್ನು ಹಿಂಸಾತ್ಮಕವಾಗಿ ನಡೆಸಿಕೊಂಡು ಹೋಗುತ್ತಿದ್ದ ಪ್ರಕರಣದ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಚಿಕ್ಕಮುಡ್ನೂರು ಗ್ರಾಮದ ಉಮ್ಮರ್ ಫಾರೂಕ್ ಮತ್ತು ಪ್ರಶಾಂತ್ ಎಂಬವರು ಆರೋಪಿಗಳು. ಅವರು ಬೀರ‍್ನಹಿತ್ಲುವಿನಿಂದ ಹೋರಿಯೊಂದನ್ನು ಖರೀದಿಸಿ ಅದನ್ನು ರಸ್ತೆ ಬದಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಿದ್ದರೆನ್ನಲಾಗಿದೆ.

ಪೊಲೀಸರು ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಹೋರಿಯನ್ನು ಖರೀದಿಸಿ ವಧೆ ಮಾಡಲು ಕೊಂಡೊಯ್ಯುತ್ತಿರುವುದಾಗಿ ತಿಳಿಸಿದ್ದರು. ಆರೋಪಿಗಳನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಆರೋಪಿಗಳ ಪೈಕಿ ಉಮ್ಮರ್ ಫಾರೂಕ್ ಪರವಾಗಿ ವಕೀಲರಾದ ನೂರುದ್ದೀನ್ ಸಾಲ್ಮರ ಮತ್ತು ಸಾತ್ವಿಕ್ ಆರಿಗ ಹಾಗೂ ಪ್ರಶಾಂತ್ ಪರವಾಗಿ ರಾಕೇಶ್ ಮಸ್ಕರೇನ್ಹಸ್ ಅವರು ವಾದಿಸಿದ್ದರು.

LEAVE A REPLY

Please enter your comment!
Please enter your name here