ಕಡಬದ ಹಸ್ತಾ ಪಿ.ಎ.ಗೆ ಸುವರ್ಣ ಗರಿ ಪ್ರಶಸ್ತಿ

0

ಕಡಬ: 2021-22ನೇ ಸಾಲಿನ ಭಾರತ್ ಸ್ಕೌಟ್ಸ್ ಗೈಡ್‌ನ ಬುಲ್‌ಬುಲ್ ವಿಭಾಗದಲ್ಲಿ ಕಡಬ ಸೈಂಟ್ ಜೋಕಿಮ್ಸ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಹಸ್ತಾ ಪಿ.ಎ.ಅವರಿಗೆ ಸುವರ್ಣ ಗರಿ ಪ್ರಶಸ್ತಿ ಲಭಿಸಿದೆ.


ಮಾ.5 ರಂದು ದ.ಕ. ಜಿಲ್ಲಾಧಿಕಾರಿಯವರ ನಿವಾಸದಲ್ಲಿ 2021-22 ನೇ ಸಾಲಿನ ತೃತೀಯ ಚರಣ ಕಬ್, ಸುವರ್ಣ ಗರಿ ಬುಲ್‌ಬುಲ್, ತೃತೀಯ ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುನ್ರೋವರ್ಸ್ ಮತ್ತು ರೇಂಜರ್ಸ್ ಪ್ರಶಸ್ತಿ ಪತ್ರ ಪ್ರಧಾನ ಸಮಾರಂಭದಲ್ಲಿ ಜಿಲ್ಲಾಧಿಕಾರಿ ರವಿಕುಮಾರ್‌ರವರು ಸುವರ್ಣ ಗರಿ ಪ್ರಶಸ್ತಿ ಪ್ರದಾನ ಮಾಡಿದರು. ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಮುಖ್ಯ ಆಯುಕ್ತ ಡಾ| ಎಂ.ಮೋಹನ್ ಆಳ್ವ, ಮಾಜಿ ಸಚಿವರೂ, ಮಾಜಿ ಸ್ಕೌಟ್ ಆಯುಕ್ತರೂ, ಜಿಲ್ಲಾ ಸಹಾಯಕ ಆಯುಕ್ತರೂ ಆದ ನಾಗರಾಜ್ ಶೆಟ್ಟಿ, ಜಿಲ್ಲಾ ಗೈಡ್ ಆಯುಕ್ತೆ (ಪ್ರಭಾರ) ಹಾಗೂ ಜಿಲ್ಲಾ ಜಂಟಿ ಕಾರ್ಯದರ್ಶಿ ಜಯವಂತಿ ಸೋನ್ಸ್, ಜಿಲ್ಲಾ ಕಾರ್ಯದರ್ಶಿ ಎಂ.ಜಿ ಕಜೆ, ಜಿಲ್ಲಾ ಕೋಶಾಧಿಕಾರಿ ಅನಿಲ್ ಕುಮಾರ್, ರಾಜ್ಯ ಸ್ಕೌಟ್ ಪ್ರತಿನಿಧಿ ತ್ಯಾಗಂ ಹರೇಕಳ, ಜಿಲ್ಲಾ ಸ್ಕೌಟ್ ಸಂಘಟನಾ ಶಿಕ್ಷಕ ನವೀನ್ ಚಂದ್ರ ಅಂಬೂರಿ, ಜಿಲ್ಲಾ ಗೈಡ್ ಸಂಘಟನಾ ಶಿಕ್ಷಕಿ ಫ್ಲೇವಿ ಡಿ ಸೋಜ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ, ಜಿಲ್ಲಾ ಸಹಾಯಕ ಆಯುಕ್ತರು, ಸ್ಥಳೀಯ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸುವರ್ಣ ಗರಿ ಪ್ರಶಸ್ತಿ ಪಡೆದುಕೊಂಡ ಹಸ್ತಾ ಪಿ.ಎ.ಅವರಿಗೆ ಪ್ಲಾಕ್ ಲೀಡರ್ ಪೂಂಜಾಲಕಟ್ಟೆ ಸಿ.ಆರ್.ಪಿ.ಚೇತನಾ ಅವರು ಮಾರ್ಗದರ್ಶನ ಮಾಡಿದರು ಹಸ್ತಾ ಪಿ.ಎ.ರವರು ಕಡಬ ಸಿ.ಎ.ಬ್ಯಾಂಕ್ ಸಿಬ್ಬಂದಿ ಆನಂದ ಗೌಡ ಕೋಂಕ್ಯಾಡಿ ಮತ್ತು ಪೂರ್ಣಿಮಾ ಜಿ.ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here