ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಶಾಲೆಗೆ ಸಚಿವ ಅಶ್ವಥ್ ನಾರಾಯಣ್ ಭೇಟಿ

0

ಕಡಬ: ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಸಿ.ಎನ್. ಅವರು ಮಂಗಳವಾರ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಗೆ ಭೇಟಿ ನೀಡಿದರು.


ಸಚಿವರು ಹೆಲಿಕಾಪ್ಟರ್ ಮೂಲಕ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಮೈದಾನದಲ್ಲಿ ಇಳಿದು ಬಳಿಕ ಕಾರಿನಲ್ಲಿ ಕುಕ್ಕೆಗೆ ತೆರಳಿದರು. ಹಿಂದಿರುಗುವ ವೇಳೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಗೆ ಭೇಟಿ ನೀಡಿದರು. ಈ ವೇಳೆ ಶಾಲಾ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಸಚಿವರು ಶಾಲೆಯ ಬಗ್ಗೆ ಮಾಹಿತಿ ಪಡೆದರು. ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮಾ, ಮುಖ್ಯಗುರು ಗಣಪತಿ ಭಟ್, ಪ್ರಮುಖರಾದ ವಾಡ್ಯಪ್ಪ ಗೌಡ, ಸತೀಶ್ ಎರ್ಕ, ಲೋಕೋಪಯೋಗಿ ಇಲಾಖಾ ಇಂಜಿನಿಯರ್ ಪ್ರಮೋದ್ ಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಚಿವರು ಶಾಲಾ ಮಕ್ಕಳತ್ತ ಕೈ ತೋರಿಸಿ ನಮಸ್ಕರಿಸಿದರು.

LEAVE A REPLY

Please enter your comment!
Please enter your name here