ದ.ಕ.ಜಿಲ್ಲಾ ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ಶೇಷಪ್ಪ ಬಂಬಿಲ‌ ಅಧಿಕಾರ ಸ್ವೀಕಾರ

0

ಪುತ್ತೂರು: ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ, ಸೌಹಾರ್ದ ಪ್ರಶಸ್ತಿ ಪುರಸ್ಕೃತರಾದ ಸಾಮಾಜಿಕ ಮುಂದಾಳು ಸವಣೂರು ಸಮೀಪದ ಬಂಬಿಲ ಮೀನಕೊಳಂಜಿ ನಿವಾಸಿ, ಬಿ ಶೇಷಪ್ಪ ಬಂಬಿಲ ಆಯ್ಕೆಯಾಗಿರುತ್ತಾರೆ.

ಮಂಗಳೂರಿನ ಬಲ್ಮಠದ ಸಹೋದಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಕೊಲ್ಲಾಡಿ ಬಾಲಕೃಷ್ಣ ರೈಯವರಿಂದ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಜ ಅಯ್ಯರ್ ಅವರು ಸಂಸ್ಥೆಯ ನೀತಿ ನಿಯಮಗಳ ಬಗ್ಗೆ ವಿವರಿಸಿದರು ಮತ್ತು ಜಿಲ್ಲಾ ಪದಾಧಿಕಾರಿಗಳಿಗೆ ಹಾಗೂ ಎಲ್ಲಾ 31 ನಿರ್ದೇಶಕರುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ನ್ಯಾಯಾಂಗ ಇಲಾಖೆಯ ಶಿರಸ್ತೆದಾರ ಪ್ರಕಾಶ್, ಅಗರಿ ಉದಯ್ ಕುಮಾರ್, ಸಂಸ್ಥೆಯ ಜಿಲ್ಲಾ ಉಸ್ತುವಾರಿ ಅಜಯ್ ಕುಮಾರ್, ನಿಕಟ ಪೂರ್ವ ಅಧ್ಯಕ್ಷ ಪ್ರಸನ್ನ ಕುಮಾರ್, ಉಪಾಧ್ಯಕ್ಷ ಆಲಿವರ್ ಜಾಯಲ್ ಮೆಂಡನ್ಸಾ, ಕಾರ್ಯದರ್ಶಿ ರೋಷನ್ ಲೋಬೊ, ಜೊತೆ ಕಾರ್ಯದರ್ಶಿ ಸುಮಾ ಪ್ರಸಾದ್ ಹಾಗೂ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here