ಮಾ.9,10: ಸಾಜ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಖುತುಬಿಯತ್ ನೇರ್ಚೆಯ 38ನೇ ವಾರ್ಷಿಕೋತ್ಸವ-2 ದಿನಗಳ ಧಾರ್ಮಿಕ ಮತ ಪ್ರಭಾಷಣ

0

ಪುತ್ತೂರು: ಮುಹಿಯುದ್ದೀನ್ ಜುಮಾ ಮಸೀದಿ ಸಾಜ ಇದರ ಆಶ್ರಯದಲ್ಲಿ ವಾರ್ಷಿಕ ಖುತುಬಿಯತ್ ನೇರ್ಚೆಯ 38ನೇ ವಾರ್ಷಿಕೋತ್ಸವದ ಅಂಗವಾಗಿ 2 ದಿನಗಳ ಧಾರ್ಮಿಕ ಮತ ಪ್ರಭಾಷಣ ಮಾ.9 ಮತ್ತು ಮಾ.10ರಂದು ರಾತ್ರಿ ಗಂಟೆ 8-೦೦ರಿಂದ ಸಾಜ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಮಸೀದಿಯ ಗೌರವಾಧ್ಯಕ್ಷರಾದ ಅಸ್ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು ನೇತೃತ್ವದಲ್ಲಿ ನಡೆಯಲಿದೆ.

ಮಾ.9ರಂದು ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.

ಮಾ.10ರಂದು ಮಗ್ರಿಬ್ ನಮಾಜಿನ ಬಳಿಕ ಅಬ್ದುಲ್ಲಾಹಿ ಬಾಖವಿ ಪುದಿಯವಳಪ್ಪು ನೇತೃತ್ವದಲ್ಲಿ ಖುತುಬಿಯತ್ ನೇರ್ಚೆ ನಡೆಯಲಿದ್ದು ನಂತರ ನಡೆಯುವ ಸಮಾರೋಪ ಸಮಾರಂಭದಲ್ಲಿ ಅಸ್ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು ಅಧ್ಯಕ್ಷತೆ ವಹಿಸಿ ದುವಾ ನೆರವೇರಿಸಲಿದ್ದಾರೆ. ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಾಜ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಯೂಸುಫ್ ಗೌಸಿಯಾ ಸಾಜ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here