ಬೆಳ್ತಂಗಡಿ ಸುದ್ದಿ ಬಿಡುಗಡೆಯ ಮುಖ್ಯ ವರದಿಗಾರರಾಗಿ ಸಂತೋಷ್ ಕುಮಾರ್ ಶಾಂತಿನಗರ ನೇಮಕ

0

ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರಪತ್ರಿಕೆಯ ಮುಖ್ಯ ವರದಿಗಾರರಾಗಿ ಸಂತೋಷ್ ಕುಮಾರ್ ಶಾಂತಿನಗರ ಅವರನ್ನು ನೇಮಕಗೊಳಿಸಲಾಗಿದೆ.

ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಶಾಂತಿನಗರ ನಿವಾಸಿಯಾಗಿರುವ ಸಂತೋಷ್ ಕುಮಾರ್ ಅವರು ಪುತ್ತೂರು ಸುದ್ದಿ ಬಿಡುಗಡೆ ದಿನಪತ್ರಿಕೆ ಮತ್ತು ಸುದ್ದಿ ನ್ಯೂಸ್ ಚಾನೆಲ್‌ನ ಮುಖ್ಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದರೊಂದಿಗೆ ಹೆಚ್ಚುವರಿಯಾಗಿ ಸಂತೋಷ್ ಕುಮಾರ್ ಅವರು ಬೆಳ್ತಂಗಡಿ ಸುದ್ದಿ ಬಿಡುಗಡೆಯ ಮುಖ್ಯ ವರದಿಗಾರರಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ. ವರದಿ ಕಳುಹಿಸುವವರು ಅವರ ಮೊಬೈಲ್ ಫೋನ್ ನಂಬರ್ 9980580399ನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here