ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ನಯನಾ ರೈ, ಡಾ.‌ವೀಣಾ ಭಟ್ ರಿಗೆ ಸನ್ಮಾನ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮಂಗಳೂರು ಇದರ ವತಿಯಿಂದ ಮಂಗಳೂರು ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪುತ್ತೂರಿನ ಅಸಹಾಯಕರ ಸೇವಾ ಟ್ರಸ್ಟ್ ಮುಖ್ಯಸ್ಥೆ ನಯನ ರೈ ನೆಲ್ಲಿಕಟ್ಟೆ ಮತ್ತು ವಿಶೇಷ ಚೇತನ ಮಗಳಾದ ಮೇದಿನಿಯವರನ್ನು ಸ್ವಾವಲಂಬಿಯಾಗಿ ಸಮಾಜದಲ್ಲಿ ಬದುಕಲು ಹುರಿದಿಂಬಿಸಿ ಮುಖ್ಯ ವಾಹಿನಿಯಲ್ಲಿ ತರುವಲ್ಲಿ ಯಶಸ್ವಿಯಾದ ಪುತ್ತೂರಿನ ಡಾ. ವೀಣಾ ಜಿ.‌ಭಟ್ ಅವರನ್ನು ಸನ್ಮಾನಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ವೇದವ್ಯಾಸ ಕಾಮತ್, ದ.ಕ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಚಂಚಲ ತೇಜೋಮಯ, ಗೌರವಾಧ್ಯಕ್ಷೆ ಪ್ರೇಮಲತಾ ರಾವ್, ಉಪಾಧ್ಯಕ್ಷೆ ಉಷಾ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಮಹಿಳಾ ಒಕ್ಕೂಟಗಳ ಅಧ್ಯಕ್ಷೆ ಶಾಂತಿ ಹೆಗಡೆ, ಕಾರ್ಯದರ್ಶಿ ಪೂರ್ಣಿಮಾ ಶೆಟ್ಟಿ, ಸದಸ್ಯರಾದ ಸುರೇಖ ಹೆಬ್ಬಾರ್, ರೋಹಿಣಿ ರಾಘವ ಆಚಾರ್ಯ, ವತ್ಸಲ ರಾಜ್ಞಿ, ಸುಗುಣ ಭಟ್, ಪ್ರೇಮಾ ಕೆಮ್ಮಾಯಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here