ಉಪ್ಪಿನಂಗಡಿ ವಿಜಯ ವಿಕ್ರಮ ಕಂಬಳ ಮೆರವಣಿಗೆಗೆ ಚಾಲನೆ

0

ಉಪ್ಪಿನಂಗಡಿ 37ನೇ ವರ್ಷದ ವಿಜಯ ವಿಕ್ರಮ ಜೋಡುಕರೆ ಕಂಬಳದ ಮೆರವಣಿಗೆಗೆ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಸನ್ನಿಧಿಯಲ್ಲಿ ವೈಭವದ ಚಾಲನೆ ದೊರಕಿದೆ. ‌

ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕರುಣಾಕರ ಸುವರ್ಣ ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ.ರಾಜಾರಾಮ್‌ ಕೆ.ಬಿ ತೆಂಗಿನಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಕಂಬಳಾಭಿಮಾನಿಗಳು ಕಂಬಳ ಸಮಿತಿಯ ಪದಾಧಿಕಾರಿಗಳು, ಕಂಬಳ ಕೋಣಗಳ ಮೆರವಣಿಗೆ ಕಂಬಳ ಕರೆಯ ಬಳಿ ಆಗಮಿಸಿತು. ಕೀಲುಕುದುರೆ, ನಾಸಿಕ್‌ ಬ್ಯಾಂಡ್‌, ಪಟ್ಟಿರಾಯ, ಕೊಂಬು ವಾದ್ಯಗಳು ಮೆರವಣಿಗೆಯ ರಂಗನ್ನು ಇನ್ನಷ್ಟು ಹೆಚ್ಚಿಸಿದವು.

ಮೆರವಣಿಗೆಯಲ್ಲಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್‌ ಕುಮಾರ್‌ ರೈ, ಗೌರವಾಧ್ಯಕ್ಷ ಉಮೇಶ್‌ ಶೆಣೈ, ಉಪಾಧ್ಯಕ್ಷ ರಾಮಚಂದ್ರ ಮಣಿಯಾಣಿ, ನಟೇಶ್‌ ಪೂಜಾರಿ, ವಿದ್ಯಾಧರ ಜೈನ್‌, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕಾರ್ಯಾಧ್ಯಕ್ಷ ಅಶೋಕ್‌ ಕುಮಾರ್‌ ರೈ ಅರ್ಪಿಣಿಗುತ್ತು, ಪದಾಧಿಕಾರಿಗಳಾದ ಯೋಗೀಶ್‌ ಸಾಮಾನಿ ಸಂಪಿಗೆದಡಿ, ವಿಷ್ಣುಪ್ರಸಾದ್‌ ಬೊಳ್ಳಾವು, ದಿಲೀಪ್‌ ಶೆಟ್ಟಿ ಕರಾಯ, ಶಿವರಾಮ ಶೆಟ್ಟಿ ಗೋಲ್ತಮಜಲು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here