ಪಾಲ್ತಾಡು ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠೆ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ

0


ಸವಣೂರು : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ  ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠೆ ಹಾಗೂ ದೈವದಕೋಲವು
ಕೆಮ್ಮಿಂಜೆ ಶ್ರೀ ಲಕ್ಷ್ಮೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.


ಮಾ. 8ರಂದು ಸಂಜೆ ದೇವತಾ ಪ್ರಾರ್ಥನೆ ,ಸ್ಥಳ ಶುದ್ದಿ ,ಪ್ರಾಸಾದ ಶುದ್ದಿ ,ವಾಸ್ತು ಪೂಜೆ ನಡೆಯಿತು.
ಮಾ.9ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಶ್ರೀ ಮಹಾಗಣಪತಿ ಹೋಮ ,ಕಲಶ ಪೂಜೆ ನಡೆಯಿತು. ಬೆಳಿಗ್ಗೆ 7.48ರ ಮೀನ ಲಗ್ನದ ಶುಭ ಮುಹೂರ್ತದಲ್ಲಿ
ಶ್ರೀರಾಜಗುಳಿಗನ ಶಿಲಾ ಪ್ರತಿಷ್ಠೆ, ಕಲಶಾಭಿಷೇಕ ,ತಂಬಿಲ ಸೇವೆ ,ಮಹಾಪೂಜೆ ,ಪ್ರಸಾದ ವಿತರಣೆ ನಡೆಯಿತು.
ಸಂಜೆ ದೈವಕ್ಕೆ ಎಣ್ಣೆ ವೀಳ್ಯ ಕೊಟ್ಟು ,ರಾತ್ರಿ ಶ್ರೀರಾಜಗುಳಿಗ ದೈವದ ನರ್ತನ ಸೇವೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ರಾಜಗುಳಿಗ ಸಾನಿಧ್ಯ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here