ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ದೀಪ ಪ್ರದಾನ ಸಮಾರಂಭ

0

ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ 2022-23ನೇ ಶೈಕ್ಷಣಿಕ ಸಾಲಿನ 10ನೇ‌ ತರಗತಿ ವಿದ್ಯಾರ್ಥಿಗಳಿಗೆ ದೀಪ ಪ್ರದಾನ ಕಾರ್ಯಕ್ರಮ ಮಾ.11 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟರಮಣ ಭಟ್ ರವರು ಮಾತನಾಡಿ ವಿದ್ಯಾರ್ಥಿಗಳು ಎಷ್ಟೇ ಎತ್ತರದ ಸ್ಥಾನಕ್ಕೆ ಏರಿದರೂ ಕಲಿತ ಸಂಸ್ಥೆಯನ್ನು, ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು ಎಂದರು.

ಇಂದ್ರಪ್ರಸ್ಥ ಸಂಸ್ಥೆಗಳ ಸಂಚಾಲಕ ಯು.ಜಿ ರಾಧಾ, ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್, ಸಹ ಶಿಕ್ಷಕರುಗಳಾದ ಎವ್ಲಿನ್ ಪಾಯಸ್, ಸದಾಶಿವ ಭಟ್ ಹಾಗೂ ಶಶಿಕಲಾ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಹಾರೈಸಿದರು. 10ನೇ ತರಗತಿಯ ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ತಾವು ಕಳೆದ ಸವಿನೆನಪನ್ನು ಮೆಲುಕು ಹಾಕಿದರು.

10 ನೇ ತರಗತಿಯ ವಿದ್ಯಾರ್ಥಿಗಳು ಜ್ಞಾನದ ಸಂಕೇತವಾದ ಬೆಳಗುವ ದೀಪವನ್ನು ಕಿರಿಯ ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಸಂಸ್ಥೆಯ ಘನತೆ ಗೌರವವನ್ನು ಹೆಚ್ಚಿಸುವ ಜವಬ್ದಾರಿಯನ್ನು ಹಸ್ತಾಂತರಿಸಿದರು. ಇದರೊಂದಿಗೆ ಸಂಸ್ಥೆಗೆ ಸುಸಜ್ಜಿತ ದೃಶ್ಯ ಶ್ರವಣ ಕೊಠಡಿಯ ನಿರ್ಮಾಣಕ್ಕಾಗಿ ತಮ್ಮ ಸವಿನೆನಪಿಗಾಗಿ ಕಿರುಕಾಣಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ – ಶಿಕ್ಷಕೇತರ ವೃಂದದವರು ಹಾಗೂ ಪಾಲಕರು ಉಪಸ್ಥಿತರಿದ್ದರು. 9ನೇ ತರಗತಿಯ ವಿದ್ಯಾರ್ಥಿಗಳು ಈ ಕಾರ‍್ಯಕ್ರಮವನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here