ಬೆಟ್ಟಂಪಾಡಿ ಕಾಲೇಜಿನ ಎನ್ ಎಸ್ ಎಸ್ ಶಿಬಿರದ ಅಂಗವಾಗಿ ಮುಂಡೂರು ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

0

ಪುತ್ತೂರು: ದ ಕ ಜಿ ಪಂ ಸ ಹಿ ಪ್ರಾ ಶಾಲೆ, ಮುಂಡೂರು 1 ಇಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಭಾಗವಾಗಿ ಪುತ್ತೂರಿನ ವಿಷನ್ ಐ ಕೇರ್ ಆಪ್ಟಿಕಲ್ಸ್ ಇವರ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತವಾಗಿ ಕಣ್ಣಿನ ತಪಾಸಣೆ ನಡೆಯಿತು.

ಸ್ವರ್ಗ ಸ್ವಾಮಿ ವಿವೇಕಾನಂದ ಎ ಯು ಪಿ ಶಾಲೆಯ ನಿವೃತ್ತ ಮುಖ್ಯ ಗುರು ರಾಮಯ್ಯ ರೈ ನುಳಿಯಾಲು ಕಾರ್ಯಕ್ರಮ ಉದ್ಘಾಟಿಸಿದರು.

ಶಿಬಿರಾರ್ಥಿಗಳು, ಪೋಷಕರು, ಊರವರು ಹಾಗೂ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದರು. ಡಾ.ಸುಜನ್ ರಾಜ್, ಭವ್ಯ ಕುಮಾರಿ ಮತ್ತು ಪೂಜಾ ತಪಾಸಣೆ ನಡೆಸಿದರು. ಶಾಲಾ ಮುಖ್ಯಗುರು ಆಶಾ, ಶಿಕ್ಷಕಿಯರಾದ ಸಾವಿತ್ರಿ ಟಿ ಹಾಗೂ ಸೌಮ್ಯ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಭಾಸ್ಕರ ಕರ್ಕೇರ, ಶಿಬಿರಾಧಿಕಾರಿಗಳಾದ ಹರಿಪ್ರಸಾದ್ ಎಸ್ ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ನವ್ಯಶ್ರೀ ಸ್ವಾಗತಿಸಿ, ರಮ್ಯಶ್ರೀ ವಂದಿಸಿದರು. ಅನನ್ಯ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here