ಚುನಾವಣೆ ಹಿನ್ನೆಲೆ:ಅಂತರ್ರಾಜ್ಯ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾ ಎಸ್ಪಿ ಭೇಟಿ-ಸಿಬ್ಬಂದಿಗಳಿಗೆ ಮಾರ್ಗದರ್ಶನ

0

ಪುತ್ತೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ|ಅಮಟೆ ವಿಕ್ರಮ್ ಅವರು ಅಂತರ್ರಾಜ್ಯ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಚುನಾವಣಾ ಕರ್ತವ್ಯಗಳ ಬಗ್ಗೆ ಸಿಬ್ಬಂದಿಗಳಿಗೆ ಸಲಹೆ, ಮಾರ್ಗದರ್ಶನ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಬರುವ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಾಣಾಜೆ, ಈಶ್ವರಮಂಗಲಗಳಲ್ಲಿರುವ ಅಂತರ್ರಾಜ್ಯ ಚೆಕ್ ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಾ|ಅಮಟೆ ವಿಕ್ರಮ್ ಅವರು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣೆ ಕರ್ತವ್ಯಗಳ ಬಗ್ಗೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿ ಚೆಕ್ ಪೋಸ್ಟ್‌ಗಳಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.

ಕಡಬ ತಾಲೂಕು ಚುನಾವಣೆ ಸೂಕ್ಷ್ಮಪ್ರದೇಶಗಳಾದ ಸುಬ್ರಹ್ಮಣ್ಯ ಕಾಲೇಜು, ಕೊಂಬಾರು ಮತಗಟ್ಟೆಗಳಿಗೆ ಭೇಟಿ ಯೂತ್ ಕಮಿಟಿ ಸಭೆಗಳನ್ನು ನಡೆಸಿ, ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿದರು. ಕುಲ್ಕುಂದ ಸೇರಿದಂತೆ ನಕ್ಸಲ್ ಪೀಡಿತ ಕೆಲ ಮತಗಟ್ಟೆಗಳಿಗೂ ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ಮತ್ತೊಂದೆಡೆ, ಗಡಿ ಪ್ರದೇಶಗಳಲ್ಲಿ ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ.

LEAVE A REPLY

Please enter your comment!
Please enter your name here