ಮುಂಡೂರು ಶ್ರೀಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಹೊರೆಕಾಣಿಕೆ ಸಮರ್ಪಣೆ

0

ನರಿಮೊಗರು: ಮುಂಡೂರು ಶ್ರೀಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಮಾ.15, 16ರಂದು ನಡೆಯಲಿರುವ ಸಾರ್ವಜನಿಕ ಶ್ರೀಮಹಾಮೃತ್ಯುಂಜಯ ಹೋಮ, ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣಾ ಕಾರ್ಯಕ್ರಮ ಮಾ.13ರಂದು ನಡೆಯಿತು.

ಪ್ರಧಾನ ಅರ್ಚಕ ರಮೇಶ ಬೈಪಾಡಿತ್ತಾಯರವರು ಪೂಜಾ ವಿಧಿವಿಧಾನ ನಡೆಸಿಕೊಟ್ಟರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕಪ್ಪ ಗೌಡ ಕರೆಮನೆ, ಸದಸ್ಯರಾದ ಕುತ್ತಿಗದ್ದೆ ಜನಾರ್ದನ ಜೋಯಿಸ, ಬಾಲಚಂದ್ರ ಗೌಡ ಕಡ್ಯ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

ಸಹಾಯಕ ಅರ್ಚಕ ಶಂಕರನಾರಾಯಣ ಭಟ್, ಸಿಬಂದಿ ವಿಜಿತ್ ಸಹಕರಿಸಿದರು.

LEAVE A REPLY

Please enter your comment!
Please enter your name here