ಕುಂಬ್ರ: ಕಟ್ಟಡ ಕಾರ್ಮಿಕರಿಗೆ ಕಾರ್ಡ್ ವಿತರಣೆ

0

ಪುತ್ತೂರು: ಬಿಎಂಎಸ್ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಹಾಗೂ ಕಾಮಗಾರಿ ಮಜ್ದೂರು ಸಂಘ ಕುಂಬ್ರ ವಲಯ ಇದರ ವತಿಯಿಂದ 110 ಮಂದಿ ಕಟ್ಟಡ ಕಾರ್ಮಿಕರಿಗೆ ಕಾರ್ಡ್ ವಿತರಣೆ ಮಾ.13 ರಂದು ಕುಂಬ್ರ ಕಟ್ಟಡ ಕಾರ್ಮಿಕರ ಕಛೇರಿ ಆವರಣದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರುರವರು ಕಾರ್ಡ್ ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಕಟ್ಟಡ ಕಾರ್ಮಿಕರ ಸಂಘದ ಕುಂಬ್ರ ವಲಯ ಅಧ್ಯಕ್ಷ ಪುರಂದರ ಶೆಟ್ಟಿ ಮುಡಾಲ, ಕಾರ್ಯದರ್ಶಿ ದಿವಾಕರ ಆಚಾರ್ಯ, ಜತೆ ಕಾರ್ಯದರ್ಶಿ ಜಯಂತ ಪೂಜಾರಿ, ಹರೀಶ್ ಕುಲಾಲ್ ಕೈಕಾರ ಮತ್ತಿತರರು ಉಪಸ್ಥಿತರಿದ್ದರು.

ಕುಂಬ್ರ ಸಿಎ ಬ್ಯಾಂಕ್ ನಿರ್ದೇಶಕ ಸಂತೋಷ್ ಕುಮಾರ್ ರೈ ಕೈಕಾರ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here