ಮಾ.18: ಪುತ್ತೂರು ತಹಶೀಲ್ದಾರ್‌ರಿಂದ ಬಲ್ನಾಡು ಗ್ರಾ.ಪಂ. ಸಭಾಭವನದಲ್ಲಿ ಗ್ರಾಮ ವಾಸ್ತವ್ಯ

0

ಪುತ್ತೂರು: ಪುತ್ತೂರು ತಾಲೂಕು ತಹಶೀಲ್ದಾರ್ ಶಿವಶಂಕರ್‌ರವರಿಂದ ಬಲ್ನಾಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಾ.18ರಂದು ಬೆಳಿಗ್ಗೆ 10ರಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ.

ಗ್ರಾಮ ವಾಸ್ತವ್ಯದಲ್ಲಿ ತಹಶೀಲ್ದಾರರು ಕಂದಾಯ ಇಲಾಖೆ ಮತ್ತು ಇನ್ನಿತರೇ ಇಲಾಖೆಗಳ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ. ಪುತ್ತೂರು ತಾಲೂಕಿನ ಎಲ್ಲಾ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಎಲ್ಲಾ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಿಂದ ಸಾರ್ವಜನಿಕರಿಗೆ ಒದಗಿಸಲಾಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅಲ್ಲದೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಅರ್ಜಿ/ಮಾಹಿತಿಯನ್ನು ಪಡೆದು ಅರ್ಹ ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲು ಕ್ರಮ ಜರಗಲಿಸಲಿದ್ದಾರೆ. ಬಲ್ನಾಡು ಗ್ರಾಮದ ಎಲ್ಲಾ ಸಾರ್ವಜನಿಕರು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯುವಂತೆ ತಹಶೀಲ್ದಾರ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here