ಈಶ್ವರಮಂಗಲ: ಬಹುಕಾಲದ ರಸ್ತೆಯ ಬೇಡಿಕೆ ಈಡೇರಿಸಿದ ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ರೈ

0

ಪುತ್ತೂರು: ತಾಲೂಕಿನ ಪಡುವನ್ನೂರು ಗ್ರಾಮದ ಕುತ್ಯಾಳ ಹೊಸಮನೆ ಎಂಬಲ್ಲಿ 10 ಮನೆಗಳಿಗೆ ಹೋಗಲು ಸರಿಯಾದ ರಸ್ತೆ ಇಲ್ಲದಿರುವುದನ್ನು ಮನಗಂಡ ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಸ್ಥಳಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ ರಸ್ತೆ ಕಾಮಗಾರಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಇಲ್ಲಿ ವಾಸವಾಗಿರುವ ಸುಮಾರು 10 ಮನೆಯವರಿಗೆ ತಮ್ಮ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದೇ ಹಲವಾರು ವರ್ಷಗಳಿಂದ ಸಮಸ್ಯೆಗೆ ಸಿಲುಕಿದ್ದರು. ಈ ಬಗ್ಗೆ ಸ್ಥಳೀಯ ಕೆಲವರು ಅಶೋಕ್ ಕುಮಾರ್ ರೈ ಅವರಲ್ಲಿ ಹೇಳಿಕೊಂಡಿದ್ದು ಅದಕ್ಕೆ ಅಶೋಕ್ ರೈ ಅವರು ತಕ್ಷಣ ಸ್ಪಂದಿಸಿದ್ದಾರೆ.

ಮಾ.14ರಂದು ಸ್ಥಳಕ್ಕೆ ಭೇಟಿ ನೀಡಿದ ಅಶೋಕ್ ರೈ ಅವರು ಸ್ಥಳಿಯರೊಂದಿಗೆ ಮಾತುಕತೆ ನಡೆಸಿದ್ದು ಈ ಸಂದರ್ಭದಲ್ಲಿ ರಸ್ತೆಗೆ ಬೇಕಾದ ಜಾಗವನ್ನು ಬಿಟ್ಟು ಕೊಡಲು ಜಾಗದ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ. ರಸ್ತೆ ನಿರ್ಮಾಣ ಕಾಮಗಾರಿಯ ವೆಚ್ಚವನ್ನು ನಾನೇ ಭರಿಸುವುದಾಗಿ ಅಶೋಕ್ ಕುಮಾರ್ ರೈ ಹೇಳಿದರು. ಅದರಂತೆ ಜೆಸಿಬಿ ಮೂಲಕ ರಸ್ತೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಕಾಮಗಾರಿಯ ಪೂರ್ತಿ ವೆಚ್ಚ ನಾನೇ ಭರಿಸುತ್ತೇನೆ-ಅಶೋಕ್ ರೈ
ಪುರಾತನ ಕಾಲದಿಂದಲೂ ಪಡುವನ್ನೂರು ಗ್ರಾಮದ ಕುತ್ಯಾಳ ಹೊಸಮನೆ ಎಂಬಲ್ಲಿಗೆ ಸಂಪರ್ಕ ರಸ್ತೆ ಇಲ್ಲದ ಕಾರಣ ಸ್ಥಳೀಯರು ತೊಂದರೆಗೆ ಒಳಗಾಗಿದ್ದರು. ಅಲ್ಲಿನ ನಿವಾಸಿಗಳ ಮನವಿ ಮೇರೆಗೆ ನಾನು ಸ್ಥಳಕ್ಕೆ ತೆರಳಿ ಸ್ಥಳೀಯರನ್ನು ಒಟ್ಟು ಸೇರಿಸಿ ಮಾತುಕತೆ ನಡೆಸಿ ಎಲ್ಲರ ಮನವೊಲಿಸಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು. ರಸ್ತೆ ನಿರ್ಮಾಣ ಕಾಮಗಾರಿಯ ಪೂರ್ತಿ ವೆಚ್ಚವನ್ನು ನಾನೇ ಭರಿಸುತ್ತೇನೆ.

ಸ್ಥಳೀಯರಲ್ಲಿ ಸಂತಸ:
ನಮ್ಮ ಬಹುಕಾಲದ ರಸ್ತೆ ಬೇಡಿಕೆ ಅಶೋಕ್ ಕುಮಾರ್ ರೈ ಅವರಿಂದಾಗಿ ಈಡೇರಿದ್ದು ನಮಗೆಲ್ಲಾ ಬಹಳ ಖುಷಿಯಾಗಿದೆ. ಅಶೋಕ್ ಕುಮಾರ್ ರೈ ಅವರಿಗೆ ಜನ ಸೇವೆ ಮಾಡಲು ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಸ್ಥಳೀಯ ನಿವಾಸಿಗಳು ಹೇಳಿದರು.

LEAVE A REPLY

Please enter your comment!
Please enter your name here