ಮಾ.18: ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಪುತ್ತೂರು, ಸುಳ್ಯ, ಕಡಬ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ

0

ಪುತ್ತೂರು: ಮಾ.18ರಂದು ಮಡಿಕೇರಿಯಲ್ಲಿ ನಡೆಯುವ ರಾಜ್ಯದ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮ್ಮೇಳನಕ್ಕೆ ಭಾಗವಹಿಸುವ ಅರ್ಹ ಫಲಾನುಭವಿಗಳ ಅನುಕೂಲಕ್ಕಾಗಿ ಕ.ರಾ.ರ.ಸಾ. ನಿಗಮದಿಂದ ಬಸ್ಸುಗಳ ನಿಯೋಜನೆ ಮಾಡುವುದರಿಂದ ಬಸ್ಸು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕ.ರಾ.ರ.ಸಾ.ನಿ. ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಸಮ್ಮೇಳನಕ್ಕೆ ಭಾಗವಹಿಸುವ ಅರ್ಹ ಫಲಾನುಭವಿಗಳ ಅನುಕೂಲಕ್ಕಾಗಿ ನಿಗಮದಿಂದ ಸುಮಾರು 103 ಬಸ್ಸುಗಳನ್ನು ಒಪ್ಪಂದದ ಮೇರೆಗೆ ಕಾರ್ಯಾಚರಣೆ ಮಾಡಲು ಕೊಡಗು ಜಿಲ್ಲಾಡಳಿತದಿಂದ ಕೋರಿಕೆ ಬಂದಿರುತ್ತದೆ. ಆದರಂತೆ ಸದರಿ ಕಾರ್ಯಕ್ರಮಕ್ಕೆ ನಿಗಮದ ಬಸ್ಸುಗಳನ್ನು ನಿಯೋಜನೆ ಕೈಗೊಳ್ಳಲಾಗಿರುತ್ತದೆ. ಆದುದರಿಂದ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಪುತ್ತೂರು, ಸುಳ್ಯ, ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾದ್ಯತೆಯಿರುತ್ತದೆ.

ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಕರಾರಸಾ ನಿಗಮದೊಂದಿಗೆ ಸಹಕರಿಸಬೇಕೆಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here