ಪಡುಮಲೆ : ಮಾಂಬಾಡಿ ರಾಮಕೃಷ್ಣ ಭಟ್ ನಿಧನ

0

ಬಡಗನ್ನೂರುಃ ಪಡುಮಲೆ ಈಶಮೂಲೆ ನಿವಾಸಿ ಮಾಂಬಾಡಿ ರಾಮಕೃಷ್ಣ ಭಟ್ (95 ವ) ಅಲ್ಪ ಕಾಲದ ಅಸೌಖ್ಯದಿಂದ ಮಾ.15 ರಂದು ನಿಧನರಾದರು. ಮೃತರು 4 ಪುತ್ರರು, 4 ಹೆಣ್ಣು ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳನ್ನು ಅಗಲಿದ್ದಾರೆ.

ಪ್ರಸಿದ್ಧ ಜ್ಯೋತಿಷಿ ಮಾಂಬಾಡಿ ಈಶ್ವರ ಭಟ್ಟರ ಪುತ್ರರಾಗಿದ್ದ ಇವರು ತಮ್ಮ ಚಿಕ್ಕಪ್ಪ ಮಾಂಬಾಡಿ ನಾರಾಯಣ ಭಟ್ಟರಿಂದ ಮದ್ದಳೆ ಕಲಿತು ಹವ್ಯಾಸಿ ಕಲಾವಿದರಾಗಿದ್ದು, ಕೂಡ್ಲು ಮೇಳದ ಸಂಚಾಲಕರಾಗಿಯೂ ಸೇವೆ ಸಲ್ಲಿಸಿ ಬೆನಕ ಯಕ್ಷ ಕಲಾ ವೇದಿಕೆ ಹಾಗೂ ಪಡುಮಲೆ ಕೋಟಿ ಚೆನ್ನಯ ಯುವಕ ಮಂಡಲ ಪ್ರಶಸ್ತಿಗೆ ಭಾಜನರಾಗಿದ್ದರು.

ಯಕ್ಷಗಾನ ಶಿಕ್ಷಕರಾಗಿಯೂ ಹಲವು ಯುವ ಕಲಾವಿದರಿಗೆ ಮಾರ್ಗದರ್ಶನ ನೀಡಿದ್ದರು. ಉತ್ತಮ ಚದುರಂಗ ಆಟಗಾರರಾಗಿಯೂ ಕೆಲವು ಪ್ರಶಸ್ತಿಗಳನ್ನು ಪಡೆದಿದ್ದರು.

LEAVE A REPLY

Please enter your comment!
Please enter your name here