ಒಳಮೊಗ್ರು ಗ್ರಾ.ಪಂಗೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ, ಶ್ಲಾಘನೆ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ ನೂತನ ಕಛೇರಿಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್‌ರವರು ಮಾ.16 ರಂದು ಭೇಟಿ ನೀಡಿದರು.

ಪಂಚಾಯತ್ ಕಛೇರಿಗೆ ಭೇಟಿ ನೀಡಿ ಕಛೇರಿ ಕಟ್ಟಡ ಹಾಗೂ ಅಲ್ಲಿನ ವ್ಯವಸ್ಥೆಯನ್ನು ಕಂಡು ಶ್ಲಾಘನೆ ವ್ಯಕ್ತಪಡಿಸಿದರು. ಕೆಲಹೊತ್ತು ಕಛೇರಿಯಲ್ಲಿ ಆಸೀನರಾದ ಇವರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್.ರವರ ಜೊತೆ ಗ್ರಾ.ಪಂ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ಜಿಲ್ಲೆಯಲ್ಲೇ ನೂತನ ವಿನ್ಯಾಸದ ಕಟ್ಟಡವನ್ನು ನಿರ್ಮಿಸಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪಂಚಾಯತ್‌ನಿಂದ ಇನ್ನಷ್ಟು ಗ್ರಾಮದ ಅಭಿವೃದ್ಧಿ ಕೆಲಸಗಳು ಆಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರವೀಣ್ ಪಲ್ಲತ್ತಾರು, ಗುತ್ತಿಗೆದಾರ ನವೀನ್ ಪ್ರಸಾದ್ ಕೈಕಾರ, ಉದ್ಯಮಿ ಸಂತೋಷ್ ಕುಮಾರ್ ರೈ ಕೈಕಾರ, ವಿಶ್ವನಾಥ ರೈ, ಪಂಚಾಯತ್ ಸಿಬ್ಬಂದಿಗಳಾದ ಗುಲಾಬಿ, ಜಾನಕಿ ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್.ರವರು ಸ್ವಾಗತಿಸಿ ಸತ್ಕರಿಸಿದರು.

LEAVE A REPLY

Please enter your comment!
Please enter your name here